Wednesday, August 11, 2021

ಭದ್ರಾವತಿಯಲ್ಲಿ ಒಂದೇ ದಿನ ೧೪ ಸೋಂಕು : ಇಬ್ಬರು ಬಲಿ

     ಭದ್ರಾವತಿ, ಆ. ೧೧: ತಾಲೂಕಿನಲ್ಲಿ ಕೊರೋನಾ ಸೋಂಕು ಪುನಃ ಏರಿಕೆಯಾಗುತ್ತಿದ್ದು, ಒಂದೇ ದಿನ ೧೪ ಸೋಂಕು ಪತ್ತೆಯಾಗುವುದರೊಂದಿಗೆ ಇಬ್ಬರು ಬಲಿಯಾಗಿದ್ದಾರೆ.
     ಮಂಗಳವಾರ ಕೇವಲ ೪ ಸೋಂಕು ಪತ್ತೆಯಾಗಿದ್ದು, ಬುಧವಾರ ನಗರ ಹಾಗು ಗ್ರಾಮಾಂತರ ಭಾಗದಲ್ಲಿ ತಲಾ ೭ ರಂತೆ ಒಟ್ಟು ೧೪ ಸೋಂಕು ಕಾಣಿಸಿಕೊಂಡಿದೆ. ಅಲ್ಲದೆ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. ಇದರಿಂದಾಗಿ ಕೊರೋನಾ ೩ನೇ ಅಲೆ ವ್ಯಾಪಿಸಿರುವ ಆತಂಕ ಎದುರಾಗಿದ್ದು, ತಾಲೂಕು ಆಡಳಿತ ಎಚ್ಚೆತ್ತುಕೊಳ್ಳಬೇಕು. ತಾಲೂಕಿನಾದ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗಿದೆ.  

No comments:

Post a Comment