ಭದ್ರಾವತಿ, ಆ. ೧೩: ನಗರದ ಹೃದಯ ಭಾಗದಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಬೇಡ್ಕರ್ ಭವನ ಕಾಮಗಾರಿ ನಿರ್ಲಕ್ಷ್ಯ ಖಂಡಿಸಿ ಹಾಗು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಆ.೧೪ರಂದು ಬೆಳಿಗ್ಗೆ ೧೧ ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಿಂಭಾಗದಲ್ಲಿ ನಿರ್ಮಾಣಗೊಳ್ಳುತ್ತಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನ ಮುಂಭಾಗದಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಪಿಂಚಣಿ ಅವ್ಯವಸ್ಥೆ, ಆದಾಯ ಮಿತಿಯೊಂದಿಗೆ ಬಡವರಿಗೆ ಪಡಿತರ ಚೀಟಿ ವಜಾಗೊಳಿಸಿರುವುದನ್ನು ಖಂಡಿಸಿ ಹಾಗು ಕೋವಿಡ್-೧೯ ಸೋಂಕಿನಿಂದ ಮೃತಪಟ್ಟವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವಂತೆ ಹಾಗು ನಿವೇಶನ ರಹಿತ, ಭೂಮಿ ರಹಿತ ಬಡವರ ರಕ್ಷಣೆಗೆ ಆಗ್ರಹಿಸಲಾಗುವುದು.
ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು, ರೈತರು, ಕಾರ್ಮಿಕರು ಸೇರಿದಂತೆ ಸಮಸ್ತ ನಾಗರೀಕರು ಕೋವಿಡ್-೧೯ರ ಮಾರ್ಗಸೂಚಿಗಳನ್ವಯ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment