Friday, August 27, 2021

ಆ.೨೮ರಂದು ವಿದ್ಯುತ್ ಸ್ಥಗಿತ


ಭದ್ರಾವತಿ, ಆ. ೨೭: ಮೆಸ್ಕಾಂ ಘಟಕ-೨ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.೨೮ರಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ಸ್ಥಗಿತಗೊಳ್ಳಲಿದೆ.
ಹೊಸಸೇತುವೆ ರಸ್ತೆ, ಸಿದ್ದಾರೂಢ ನಗರ, ಶಂಕರ ಮಠದ ರಸ್ತೆ, ಕನಕನಗರ, ಹಳೇನಗರ, ಕೋಟೆ ಏರಿಯಾ, ಖಾಜಿ ಮೊಹಲ್ಲಾ, ಕಂಚಿನಬಾಗಿಲು, ಕೆಎಸ್‌ಆರ್‌ಟಿಸಿ ಘಟಕದ ಸುತ್ತಮುತ್ತ, ಅಂಬೇಡ್ಕರ್ ನಗರ, ಹನುಮಂತ ನಗರ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ಸ್ಥಗಿತಗೊಳ್ಳಲಿದ್ದು, ಗ್ರಾಹಕರು ಸಹಕರಿಸುವಂತೆ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

No comments:

Post a Comment