Monday, September 13, 2021

ಸೆ.೧೪ರಂದು ವಿವಿಧೆಡೆ ಶ್ರೀ ವೀರಭದ್ರೇಶ್ವರ ಸ್ವಾಮಿ ಜಯಂತ್ಯೋತ್ಸವ

ಭದ್ರಾವತಿ, ಸೆ. ೧೩: ಲೋಕ ಕಲ್ಯಾಣಾರ್ಥವಾಗಿ ಜಗದೊಡೆಯ ಶಿವನಿಂದ ಉದಯಿಸಿದ ಶ್ರೀ ವೀರಭದ್ರೇಶ್ವರ ಸ್ವಾಮಿಯ ಜಯಂತ್ಯೋತ್ಸವ ತಾಲೂಕಿನ ವಿವಿಧೆಡೆ ಸೆ.೧೪ರಂದು ಹಮ್ಮಿಕೊಳ್ಳಲಾಗಿದೆ.
    ಬಿಳಿಕಿ ಹಿರೇಮಠದಲ್ಲಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮಿಗಳ ದಿನ ಸಾನಿಧ್ಯದಲ್ಲಿ  ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕ, ಯುವ ಘಟಕ ಹಾಗು ಮಹಿಳಾ ಘಟಕ ಮತ್ತು ಬಿಳಿಕಿ ಗ್ರಾಮಸ್ಥರ ಸಹಯೋಗದೊಂದಿಗೆ ಬೆಳಿಗ್ಗೆ ೧೦ ಗಂಟೆಗೆ ಹಮ್ಮಿಕೊಳ್ಳಲಾಗಿದೆ.
       ವೀರಭದ್ರಸ್ವಾಮಿ ದೇವಸ್ಥಾನದಲ್ಲಿ ಜಯಂತ್ಯೋತ್ಸವ:
    ಹಳೇನಗರದ ವೀರಶೈವ ಸೇವಾ ಸಮಿತಿ ವತಿಯಿಂದ ವೀರಭದ್ರೇಶ್ವರ ಸ್ವಾಮಿ ಜಯಂತ್ಯೋತ್ಸವ ತಾಲೂಕು ಕಚೇರಿ ರಸ್ತೆಯಲ್ಲಿರುವ ಶ್ರೀ ವೀರಭದ್ರಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ.
    ಬೆಳಿಗ್ಗೆ ೭.೩೦ಕ್ಕೆ ವಿಶೇಷ ಪೂಜೆ, ರುದ್ರಾಭಿಷೇಕ, ಮಹಾಮಂಗಳಾರತಿ ಹಾಗು ಸ್ವಾಮಿಗೆ ಪ್ರಸಾದ ನೈವೆದ್ಯ ಕಾರ್ಯಕ್ರಮಗಳು ಜರುಗಲಿವೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕೃಪೆಗೆ ಪಾತ್ರರಾಗುವಂತೆ ಕೋರಲಾಗಿದೆ.

No comments:

Post a Comment