ಭದ್ರಾವತಿ, ಸೆ. ೧೩: ಮೆಸ್ಕಾಂ ನಗರ ಉಪವಿಭಾಗ ಘಟಕ-೨ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ಅಭಿವೃದ್ಧಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.೧೪ ರಿಂದ ೧೯ರ ವರೆಗೆ ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.
ಮಹಾಲಕ್ಷ್ಮೀ ಲೇಔಟ್, ಹೊಸ ಸೇತುವೆ ರಸ್ತೆ, ಸಿದ್ದಾರೂಢ ನಗರ, ಕನಕ ನಗರ, ಕಾಳಿದಾಸ ಬಡಾವಣೆ, ಕೋಟೆ ಏರಿಯಾ, ಖಾಜಿ ಮೊಹಲ್ಲಾ, ಬಸವೇಶ್ವರ ಸಭಾಭವನ ಸುತ್ತಮುತ್ತ ಮತ್ತು ಬನಶಂಕರಿ ದೇವಸ್ಥಾನದ ಸುತ್ತಮುತ್ತ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
No comments:
Post a Comment