Thursday, September 16, 2021

ಶಿವರಾಮ ಶಾಸ್ತ್ರಿ ನಿಧನ

ಶಿವರಾಮ ಶಾಸ್ತ್ರಿ
    ಭದ್ರಾವತಿ, ಸೆ. ೧೭: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ, ಹೊಸಮನೆ ನಿವಾಸಿ ಶಿವರಾಮ ಶಾಸ್ತ್ರಿ(೭೩) ನಿಧನ ಹೊಂದಿದರು.
    ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರನ್ನು ಹೊಂದಿದ್ದರು. ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಹೊಸಮನೆ ನಗರಸಭೆ ೧೨ನೇ ವಾರ್ಡ್ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ಅಲ್ಲದೆ ದೇವಸ್ಥಾನ ಸೇವಾ ಸಮಿತಿ ಉಪಾಧ್ಯಕ್ಷರಾಗಿದ್ದರು.  
    ಮೃತ ನಿಧನಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ, ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಸೇವಾ ಸಮಿತಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.

No comments:

Post a Comment