Thursday, September 30, 2021

‘ಭಾರತ ಸ್ವಾತಂತ್ರ್ಯದ ೭೫ ವರ್ಷಗಳು-ನನ್ನ ದೃಷ್ಠಿಯಲ್ಲಿ ಸ್ವಾತಂತ್ರ್ಯವೆಂದರೆ ಏನು?’

'ಆಜಾದಿ ಕ ಅಮೃತ್ ಮಹೋತ್ಸವ' ಆಚರಣೆ ಅಂಗವಾಗಿ ವಿಐಎಸ್‌ಎಲ್ ವತಿಯಿಂದ ಭಾಷಣ ಸ್ಪರ್ಧೆ


'ಆಜಾದಿ ಕ ಅಮೃತ್ ಮಹೋತ್ಸವ' ಆಚರಣೆಯ ಅಂಗವಾಗಿ ಭಾರತೀಯ ಉಕ್ಕು ಪ್ರಾಧಿಕಾರದ ಅಂಗ ಸಂಸ್ಥೆಯಾದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆವತಿಯಿಂದ ಕನ್ನಡ ಭಾಷೆಯಲ್ಲಿ 'ಭಾರತ ಸ್ವಾತಂತ್ರ್ಯದ ೭೫ ವರ್ಷಗಳು - ನನ್ನ ದೃಷ್ಠಿಯಲ್ಲಿ ಸ್ವಾತಂತ್ರ್ಯವೆಂದರೆ ಏನು?' ವಿಷಯವಾಗಿ ಗುರುವಾರ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯ(ಎಸ್.ಎ.ವಿ) ಪ್ರೌಢಶಾಲೆಯಲ್ಲಿ ಭಾಷಣ ಸ್ಪರ್ಧೆ ಆಯೋಜಿಸಲಾಗಿತ್ತು.
    ಭದ್ರಾವತಿ, ಸೆ. ೩೦:  'ಆಜಾದಿ ಕ ಅಮೃತ್ ಮಹೋತ್ಸವ' ಆಚರಣೆಯ ಅಂಗವಾಗಿ ಭಾರತೀಯ ಉಕ್ಕು ಪ್ರಾಧಿಕಾರದ ಅಂಗ ಸಂಸ್ಥೆಯಾದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆವತಿಯಿಂದ ಕನ್ನಡ ಭಾಷೆಯಲ್ಲಿ 'ಭಾರತ ಸ್ವಾತಂತ್ರ್ಯದ ೭೫ ವರ್ಷಗಳು - ನನ್ನ ದೃಷ್ಠಿಯಲ್ಲಿ ಸ್ವಾತಂತ್ರ್ಯವೆಂದರೆ ಏನು?' ವಿಷಯವಾಗಿ ಗುರುವಾರ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯ(ಎಸ್.ಎ.ವಿ) ಪ್ರೌಢಶಾಲೆಯಲ್ಲಿ ಭಾಷಣ ಸ್ಪರ್ಧೆ ಆಯೋಜಿಸಲಾಗಿತ್ತು.
    ಮಹಾ ಪ್ರಬಂಧಕರ ಪ್ರಭಾರಿ(ಸಿಬ್ಬಂದಿ ಮತ್ತು ಆಡಳಿತ) ಪಿ.ಪಿ. ಚಕ್ರವರ್ತಿ ಸ್ಪರ್ಧೆಗೆ ಚಾಲನೆ ನೀಡಿದರು. ಮಹಾ ಪ್ರಬಂಧಕ(ನಗರಾಡಳಿತ) ಮೋಹನ್ ರಾಜ್ ಶೆಟ್ಟಿ, ಪ್ರೌಢಶಾಲೆ ಹಾಗು ಕಾಲೇಜು ವಿಭಾಗದ ಪ್ರಾಂಶುಪಾಲೆ ಡಾ. ಎಸ್. ಹರಿಣಾಕ್ಷಿ, ನಿವೃತ್ತ ವೈದ್ಯೆ ಡಾ. ಎಸ್. ಕವಿತ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಕನ್ನಡ ಶಿಕ್ಷಕ ನಯನ್ ಕುಮಾರ್ 'ಇಂದಿನ ಜನಾಂಗಕ್ಕೆ ಭಾರತ ಸ್ವಾತಂತ್ರ್ಯ ಸಂಗ್ರಾಮದಿಂದ ಕಲಿಯಬೇಕಾದ ಪಾಠಗಳು' ಎಂಬ ವಿಷಯ ಕುರಿತು ಭಾಷಣ ಮಾಡಿದರು.
    ಅಶ್ವಿನಿ ಮತ್ತು ತಂಡದವರು ಪ್ರಾರ್ಥಿಸಿದರು. ಸಿಬ್ಬಂದಿ, ಮಹಾ ಪ್ರಬಂಧಕ (ಮಾನವ ಸಂಪನ್ಮೂಲ ಮತ್ತು ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್ ಸ್ವಾಗತಿಸಿದರು. ಜೀವಿತಾ ಮತ್ತು ರಶ್ಮಿ ಕಾರ್ಯಕ್ರಮ ನಿರೂಪಿಸಿದರು.
೧೮ ಶಾಲೆಗಳ ೩೪ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ವಿಜೇತರಿಗೆ ಬಹುಮಾನದ ರೂಪದಲ್ಲಿ ಭಾರತದ ಸ್ವಾತಂತ್ರ್ಯ ಸಂಗ್ರಾಮ ಹಾಗೂ ಸ್ವಾತಂತ್ರ್ಯ ಹೋರಾಟಗಾರರು ಕುರಿತು ಪುಸ್ತಕಗಳನ್ನು ನೀಡಲಾಯಿತು.
    ವಿಜೇತ ವಿದ್ಯಾರ್ಥಿಗಳು:
    ಎಸ್‌ಎವಿ ಪ್ರೌಢಶಾಲೆಯ ಇಂಚರ ಪ್ರಥಮ, ಕಾರೇಹಳ್ಳಿ ಬಿಜಿಎಸ್ ಪ್ರೌಢ ಶಾಲೆಯ ಶ್ರೇಯ ಎನ್ ಗೌಡ ದ್ವಿತೀಯ, ಎಸ್‌ಎವಿ ಪ್ರೌಢಶಾಲೆಯ ಅಫೀಯಾ ತಸ್ಮೀನ್ ತೃತೀಯ ಹಾಗು ಸೇಂಟ್ ಚಾರ್ಲ್ಸ್ ಕನ್ನಡ ಪ್ರೌಢಶಾಲೆಯ ಎಸ್. ಧನ್ಯಶ್ರೀ ಮತ್ತು ಪೂರ್ಣಪ್ರಜ್ಞ ಪ್ರೌಢಶಾಲೆಯ ಎಸ್. ರುಚಿತ ಹಾಗು ಕಾರೇಹಳ್ಳಿ ಬಿಜಿಎಸ್ ಪ್ರೌಢಶಾಲೆಯ ಎಸ್. ಶ್ರೀ ರಕ್ಷ ಸಮಾಧಾನಕರ ಬಹುಮಾನ ಪಡೆದುಕೊಂಡರು.

No comments:

Post a Comment