Wednesday, September 15, 2021

ಶಿಕ್ಷಕಿ ಎನ್. ತ್ರಿವೇಣಿ ಹಿಂದಿ ಶಿಕ್ಷಕ ರತ್ನ ಪ್ರಶಸ್ತಿಗೆ ಆಯ್ಕೆ

ಶಿಕ್ಷಕಿ ಎನ್. ತ್ರಿವೇಣಿ
    ಭದ್ರಾವತಿ, ಸೆ. ೧೫: ಬೆಂಗಳೂರಿನ ಕರ್ನಾಟಕ ರಾಜ್ಯ ಪ್ರೌಢ ಶಾಲಾ ಹಿಂದಿ ಶಿಕ್ಷಕರ ಸಂಘದ ವತಿಯಿಂದ ನೀಡಲಾಗುವ ಹಿಂದಿ ಶಿಕ್ಷಕ ರತ್ನ ಪ್ರಶಸ್ತಿಗೆ ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಹಿಂದಿ ಶಿಕ್ಷಕಿ ಎನ್. ತ್ರಿವೇಣಿ ಆಯ್ಕೆಯಾಗಿದ್ದಾರೆ.
    ಸೆ.೧೪ರಂದು ಆಯೋಜಿಸಲಾಗಿದ್ದ ರಾಜ್ಯಮಟ್ಟದ ಹಿಂದಿ ದಿವಸ್ ಆನ್‌ಲೈನ್ ಕಾರ್ಯಕ್ರಮದಲ್ಲಿ ಶಿಕ್ಷಕಿ ಎನ್. ತ್ರಿವೇಣಿ ಆಯ್ಕೆಯಾಗಿದ್ದು, ಈ ಕುರಿತು ಪತ್ರಿಕೆಯೊಂದಿಗೆ ಸಂತಸ ಹಂಚಿಕೊಂಡಿರುವ ಶಿಕ್ಷಕಿ ಎನ್. ತ್ರಿವೇಣಿ, ಪ್ರಶಸ್ತಿಗೆ ಆಯ್ಕೆಯಾಗಿರುವುದು ತುಂಬಾ ಸಂತೋಷವನ್ನುಂಟು ಮಾಡಿದೆ. ಈ ಬಾರಿ ಒಟ್ಟು ೪ ಶಿಕ್ಷಕರು ಪ್ರಶಸ್ತಿಗೆ ಆಯ್ಕೆಯಾಗಿದ್ದು, ಈ ಪೈಕಿ ತಾವು ಸಹ ಒಬ್ಬರಾಗಿವುದು ಹೆಮ್ಮೆಯ ವಿಚಾರವಾಗಿದೆ ಎಂದರು.
    ಎನ್. ತ್ರಿವೇಣಿ ಅವರು ಕಳೆದ ಹಲವಾರು ವರ್ಷಗಳಿಂದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಹಿಂದಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಅಲ್ಲದೆ ವೃತ್ತಿ ಜೊತೆಗೆ ವಿವಿಧ ಸಂಘ-ಸಂಸ್ಥೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡು ಗುರುತಿಸಿಕೊಂಡಿದ್ದಾರೆ.
    ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕಿ ಎನ್. ತ್ರಿವೇಣಿ ಅವರನ್ನು ಅಂತರಾಷ್ಟ್ರೀಯ ಕಬ್ಬಡಿ ಕ್ರೀಡಾಪಟು ಎಚ್.ಆರ್ ರಂಗನಾಥ್ ಹಾಗು ನಗರದ ಶಿಕ್ಷಕ ವೃಂದದವರು ಮತ್ತು ವಿವಿಧ ಸಂಘ-ಸಂಸ್ಥೆಗಳು ಅಭಿನಂದಿಸಿವೆ.

No comments:

Post a Comment