Thursday, September 23, 2021

ಸೆ.೨೪ರಂದು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಂದ ಮುಷ್ಕರ

ಭದ್ರಾವತಿ, ಸೆ. ೨೪: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ರಾಜ್ಯ ಸಮಿತಿ ತಾಲೂಕು ಶಾಖೆ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆ.೨೪ರಂದು ಅಖಿಲ ಭಾರತ ಮುಷ್ಕರ ಹಮ್ಮಿಕೊಳ್ಳಲಾಗಿದೆ.
ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಬೇಡಿಕೆಗಳನ್ನು ಈಡೇರಿಸಿಕೊಡುವಂತೆ ಒತ್ತಾಯಿಸಿ ಪ್ರಧಾನ ಮಂತ್ರಿಗಳಿಗೆ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಹಾಗು  ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆಯರು ಹಾಗು ಸಹಾಯಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಅಧ್ಯಕ್ಷೆ ಸುಶೀಲಾಬಾಯಿ, ಕಾರ್ಯಕಾರಿ ಸಮಿತಿ ಮುಖಂಡರಾದ ಆರ್. ವೇದಾವತಿ, ಕೆ.ಸಿ ವಿಶಾಲ ಕೋರಿದ್ದಾರೆ.

No comments:

Post a Comment