Monday, September 13, 2021

ಈ ಬಾರಿ ಅಧಿವೇಶನದಲ್ಲೂ ರಾಜ್ಯಮಟ್ಟದಲ್ಲಿ ಸುದ್ದಿಯಾಗುತ್ತಿರುವ ಶಾಸಕ ಬಿ.ಕೆ ಸಂಗಮೇಶ್ವರ್

ಸೋಮವಾರದಿಂದ ಆರಂಭಗೊಂಡಿರುವ ಅಧಿವೇಶನದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಧಾನಸೌಧ ಮುತ್ತಿಗೆ ಪ್ರತಿಭಟನೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ವಿಧಾನಸೌಧದ ಗೇಟ್ ತಳ್ಳುತ್ತಿರುವ ಪೋಟೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ.
    ಭದ್ರಾವತಿ, ಸೆ. ೧೩: ಶಾಸಕ ಬಿ.ಕೆ ಸಂಗಮೇಶ್ವರ್ ಇತ್ತೀಚೆಗೆ ರಾಜ್ಯಮಟ್ಟದಲ್ಲಿ ಸುದ್ದಿಯಾಗುತ್ತಿರುವುದು ಕಂಡು ಬರುತ್ತಿದ್ದು, ಕಳೆದ ವಿಧಾನಸಭೆ ಅಧಿವೇಶನದಲ್ಲಿ ಅಮಾನತುಗೊಂಡು ಸುದ್ದಿಯಾಗಿದ್ದರು.
    ಕುಟುಂಬ ಸದಸ್ಯರ ವಿರುದ್ಧ ಪೊಲೀಸ್ ದೌರ್ಜನ್ಯ ಖಂಡಿಸಿ ವಿಧಾನಸಭೆ ಅಧಿವೇಶನದಲ್ಲಿಯೇ ಸಭಾಧ್ಯಕ್ಷರ ಎದುರು ಅಂಗಿ ಕಳಚಿ ವಿವಾದಕ್ಕೆ ಒಳಗಾಗುವ ಮೂಲಕ ಕೆಲವು ದಿನಗಳವರೆಗೆ ಅಧಿವೇಶನದಿಂದ ಅಮಾನತುಗೊಂಡಿದ್ದರು. ಈ ಘಟನೆ ರಾಜ್ಯಮಟ್ಟದಲ್ಲಿಯೇ ಸುದ್ದಿಯಾಗುವ ಮೂಲಕ ಗಮನ ಸೆಳೆದಿದ್ದರು.
    ಇದೀಗ ಸೋಮವಾರದಿಂದ ಆರಂಭಗೊಂಡಿರುವ ಅಧಿವೇಶನದಲ್ಲೂ ಗಮನ ಸೆಳೆಯುತ್ತಿದ್ದು, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಧಾನಸೌಧ ಮುತ್ತಿಗೆ ಪ್ರತಿಭಟನೆಯಲ್ಲಿ ವಿಧಾನಸೌಧದ ಗೇಟ್ ತಳ್ಳುತ್ತಿರುವ ಪೋಟೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ.

No comments:

Post a Comment