Thursday, September 30, 2021

ಗಾಂಧಿ ಜಯಂತಿ : ಪ್ರಾಣಿವಧೆ, ಮಾಂಸಮಾರಾಟ ನಿಷೇಧ


    ಭದ್ರಾವತಿ, ಸೆ. ೩೦: ರಾಷ್ಟ್ರಪಿತ ಮಹಾತ್ಮಗಾಂಧಿಯವರ ಜನ್ಮದಿನ ಹಿನ್ನಲೆಯಲ್ಲಿ ಅ.೨ರಂದು ನಗಸಭೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.
    ಬಾರ್ & ರೆಸ್ಟೋರೆಂಟ್ ಹಾಗು ಮಾಂಸಹಾರಿ ಹೋಟೆಲ್‌ಗಳಲ್ಲಿ ಮಾಂಸಹಾರ ತಯಾರಿಸುವುದನ್ನು ಹಾಗು  ಕುರಿ/ಕೋಳಿ ಮತ್ತು ಇತರೆ ಮಾಂಸ ಮಾರಾಟಗಾರರು ಮಾಂಸ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಒಂದು ವೇಳೆ ಆದೇಶ ಉಲ್ಲಂಘಿಸಿದ್ದಲ್ಲಿ ಅಂತಹವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿ ನಗರಸಭೆ ಪೌರಾಯುಕ್ತರು ಎಚ್ಚರಿಸಿದ್ದಾರೆ.

No comments:

Post a Comment