ಡಾ. ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ
ಭದ್ರಾವತಿ, ಸೆ. ೨೫: ಕುಪ್ಪೂರು ಗದ್ದಿಗೆ ಮಠದ ಡಾ. ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮೀಜಿಯವರ ನಿಧನಕ್ಕೆ ತಾಲೂಕಿನ ಜೇಡಿಕಟ್ಟೆ ಶ್ರೀ ಮರುಳ ಸಿದ್ದೇಶ್ವರ ಜನಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ ಸಂತಾಪ ಸೂಚಿಸಿದ್ದಾರೆ.
ಶ್ರೀಗಳು ರಾಜ್ಯಾದ್ಯಂತ ಹೆಚ್ಚಿನ ಭಕ್ತರನ್ನು ಹೊಂದಿದ್ದು, ಕುಪ್ಪೂರು ಗದ್ದಿಗೆ ಮಠದ ಅಭಿವೃದ್ಧಿಯಲ್ಲಿ ಹೆಚ್ಚಿನ ಗಮನ ಹರಿಸುವ ಜೊತೆಗೆ ಆಧ್ಯಾತ್ಮಿಕ ಕಾರ್ಯಗಳಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡಿದ್ದರು. ಶ್ರೀಗಳು ಲಿಂಗೈಕ್ಯರಾಗಿರುವುದು ಭಕ್ತ ಸಮೂಹಕ್ಕೆ ನೋವುಂಟು ಮಾಡಿದೆ ಎಂದು ಸಂತಾಪ ಸೂಚಿಸಿದ್ದಾರೆ.
No comments:
Post a Comment