ಭದ್ರಾವತಿ, ಸೆ. ೩೦: ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕು ಕಛೇರಿ ಮುಂಭಾಗ ಅ.೧ರಂದು ಬೆಳಿಗ್ಗೆ ೧೧ ಗಂಟೆಯಿಂದ ಹಗಲು ರಾತ್ರಿ ಪ್ರತಿಭಟನಾ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
ತಾಲೂಕು ಕಛೇರಿ ಮುಂಭಾಗದ ಎಡ ಮತ್ತು ಬಲ ಭಾಗದಲ್ಲಿ ಕಬ್ಬಿಣದ ಗ್ರಿಲ್ ಅಳವಡಿಸಿರುವ ಸ್ಥಳವನ್ನು ಸಾರ್ವಜನಿಕರು ಸತ್ಯಗ್ರಹ ನಡೆಸಲು ಮೀಸಲಿಡುವುದು. ಬಡವರಿಗೆ ಆದಾಯ ಮಿತಿ ಹೆಚ್ಚಿಸಿ ಸಾವಿರಾರು ಪಡಿತರ ಚೀಟಿಗಳನ್ನು ರದ್ದುಗೊಳಿಸಿರುವುದು ಹಾಗು ದೀನದಲಿತರ ಪಿಂಚಣಿಗಳನ್ನು ವಜಾ ಮಾಡಿರುವ ಕ್ರಮವನ್ನು ಖಂಡಿಸಿ ಹಾಗು ಇನ್ನಿತರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಪ್ರತಿಭಟನಾ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರತಿಭಟನಾ ಸತ್ಯಾಗ್ರಹ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment