Saturday, September 4, 2021

ಮರಗಳ್ಳತನ ಪ್ರಕರಣ : ವಲಯ ಅರಣ್ಯಾಧಿಕಾರಿ ವಿರುದ್ಧ ದೂರು

ಭದ್ರಾವತಿ ಚನ್ನಗಿರಿ ಅರಣ್ಯ ವಲಯ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿರುವ ಮರಗಳ್ಳತನ ಪ್ರಕರಣವನ್ನು ಉನ್ನತ ತನಿಖೆಗೆ ಒಳಪಡಿಸಿ, ನಿರ್ಲಕ್ಷ್ಯ ವಹಿಸಿರುವ ವಲಯ ಅರಣ್ಯಾಧಿಕಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ತಾಲೂಕಿನ ಉಕ್ಕುಂದ ಗ್ರಾಮದ ಸಾಮಾಜಿಕ ಹೋರಾಟಗಾರ ಶಿವಕುಮಾರ್ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಾಮನಗಟ್ಟಿ ಅವರಿಗೆ ದೂರು ಸಲ್ಲಿಸಿದ್ದಾರೆ.
    ಭದ್ರಾವತಿ, ಸೆ. ೪: ಚನ್ನಗಿರಿ ಅರಣ್ಯ ವಲಯ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿರುವ ಮರಗಳ್ಳತನ ಪ್ರಕರಣವನ್ನು ಉನ್ನತ ತನಿಖೆಗೆ ಒಳಪಡಿಸಿ, ನಿರ್ಲಕ್ಷ್ಯ ವಹಿಸಿರುವ ವಲಯ ಅರಣ್ಯಾಧಿಕಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ತಾಲೂಕಿನ ಉಕ್ಕುಂದ ಗ್ರಾಮದ ಸಾಮಾಜಿಕ ಹೋರಾಟಗಾರ ಶಿವಕುಮಾರ್ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಾಮನಗಟ್ಟಿ ಅವರಿಗೆ ದೂರು ಸಲ್ಲಿಸಿದ್ದಾರೆ.
    ಚನ್ನಗಿರಿ ವಲಯ ವ್ಯಾಪ್ತಿಗೆ ಬರುವ ಅರಣ್ಯದಲ್ಲಿ ಭದ್ರಾವತಿ-ಚನ್ನಗಿರಿ ಹೆದ್ದಾರಿ ಪಕ್ಕದಲ್ಲಿಯೇ ಲಕ್ಷಾಂತರ ರು. ಬೆಲೆಬಾಳುವ ೧೩ ಸಾಗುವಾನಿ ಮರಗಳನ್ನು ಆ.೨೫ರಂದು ರಾತ್ರಿ ಕಡಿತಲೆ ಮಾಡಿ ಕಳವು ಮಾಡಲಾಗಿದೆ. ಈ ವಿಚಾರ ಆ.೨೭ರಂದು ತಮ್ಮ ಗಮನಕ್ಕೂ ತರಲಾಗಿದೆ. ಆದರೆ ಈ ಭಾಗದ ವಲಯ ಅರಣ್ಯಾಧಿಕಾರಿ ಸತೀಶ್ ಅವರು ನಿರ್ಲಕ್ಷ್ಯತನದಿಂದ ವರ್ತಿಸುತ್ತಿದ್ದು, ಕರ್ತವ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸದಿರುವುದು ಕಂಡು ಬರುತ್ತಿದೆ. ಹೆದ್ದಾರಿ ಪಕ್ಕದಲ್ಲಿಯೇ ಈ ರೀತಿಯ ಘಟನೆ ನಡೆದಿರುವಾಗ ಸುಮಾರು ೪೫ ಸಾವಿರ ಹೆಕ್ಟೇರ್ ವಿಸ್ತೀರ್ಣ ಹೊಂದಿರುವ ಅರಣ್ಯದಲ್ಲಿರುವ ಬೆಲೆಬಾಳಲುವ ಮರಗಳ ರಕ್ಷಣೆ ಇವರಿಂದ ಅಸಾಧ್ಯ ಎಂಬುದು ಕಂಡು ಬರುತ್ತಿದೆ.
    ಸತೀಶ್ ಅವರು ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸದಿರುವ ಬಗ್ಗೆ ಸಾಕಷ್ಟು ಲೋಪಗಳಿದ್ದು, ಅಲ್ಲದೆ ಇವರ ವರ್ತನೆ ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ. ಈ ಹಿನ್ನಲೆಯಲ್ಲಿ ಸತೀಶ್ ಅವರನ್ನು ತಕ್ಷಣ ಅಮಾನತುಗೊಳಿಸಿ ಈ ಮರಗಳ್ಳತನ ಪ್ರಕರಣವನ್ನು ಉನ್ನತ ತನಿಖೆಗೆ ಒಳಪಡಿಸುವಂತೆ ದೂರಿನಲ್ಲಿ ಒತ್ತಾಯಿಸಿದ್ದಾರೆ.    

No comments:

Post a Comment