Thursday, September 2, 2021

ವಿವಿಧೆಡೆ ಅಭಿಮಾನಿಗಳು, ಕಾರ್ಯಕರ್ತರಿಂದ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಮೊದಲ ಪುಣ್ಯಸ್ಮರಣೆ ಆಚರಣೆ

ಉಚಿತ ಆರೋಗ್ಯ ತಪಾಸಣಾ ಶಿಬಿರ, ವಿಕಲಚೇತನರು, ನಿರಾಶ್ರಿತರಿಗೆ ಉಚಿತ ಕ್ಷೌರ, ಅನ್ನ ಸಂತರ್ಪಣೆ


ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಮೊದಲ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಭದ್ರಾವತಿ ನಗರಸಭೆ ವಾರ್ಡ್ ನಂ.೩೧ರ ಜಿಂಕ್‌ಲೈನ್ ಸಮುದಾಯ ಭವನದಲ್ಲಿ ವಾರ್ಡ್ ನಗರಸಭಾ ಸದಸ್ಯೆ ಪಲ್ಲವಿ ಎಸ್ ದಿಲೀಪ್ ನೇತೃತ್ವದಲ್ಲಿ ಶಿವಮೊಗ್ಗ ಸುಬ್ಬಯ್ಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗು ತಾಲೂಕು ಸರ್ಕಾರಿ ಆಸ್ಪತ್ರೆ ಸಹಕಾರದೊಂದಿಗೆ ಆಯೋಜಿಸಲಾಗಿತ್ತು.  
    ಭದ್ರಾವತಿ, ಸೆ. ೨: ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರ ಮೊದಲ ವರ್ಷದ ಪುಣ್ಯ ಸ್ಮರಣೆಯನ್ನು ಗುರುವಾರ ನಗರದ ವಿವಿಧೆಡೆ ಅಭಿಮಾನಿಗಳು, ಕಾರ್ಯಕರ್ತರು ಆಚರಿಸಿದರು.
    ಉಚಿತ ಆರೋಗ್ಯ ತಪಾಸಣಾ ಶಿಬಿರ ನಗರಸಭೆ ವಾರ್ಡ್ ನಂ.೩೧ರ ಜಿಂಕ್‌ಲೈನ್ ಸಮುದಾಯ ಭವನದಲ್ಲಿ ವಾರ್ಡ್ ನಗರಸಭಾ ಸದಸ್ಯೆ ಪಲ್ಲವಿ ಎಸ್ ದಿಲೀಪ್ ನೇತೃತ್ವದಲ್ಲಿ ಶಿವಮೊಗ್ಗ ಸುಬ್ಬಯ್ಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗು ತಾಲೂಕು ಸರ್ಕಾರಿ ಆಸ್ಪತ್ರೆ ಸಹಕಾರದೊಂದಿಗೆ ಆಯೋಜಿಸಲಾಗಿತ್ತು.  
    ಚರ್ಮ ವೈದ್ಯರು, ದಂತ ತಜ್ಞರು, ಸರ್ಜನ್, ಕಿವಿ, ಮೂಗು, ಗಂಟಲು, ಮಕ್ಕಳ ತಜ್ಞರು ಮತ್ತು ಕಣ್ಣಿನ ತಜ್ಞರು ಶಿಬಿರದಲ್ಲಿ ತಪಾಸಣೆ ನಡೆಸಿದರು. ಜೊತೆಗೆ ಉಚಿತವಾಗಿ ಇಸಿಜಿ, ರಕ್ತದೊತ್ತಡ ಮತ್ತು ಮಧುಮೇಹ ಪರೀಕ್ಷೆ ನಡೆಸಲಾಯಿತು. ಸುಮಾರು ೪೫೦ಕ್ಕೂ ಹೆಚ್ಚು ಮಂದಿ ಶಿಬಿರದಲ್ಲಿ ಪಾಲ್ಗೊಂಡು ಸದುಪಯೋಗ ಪಡೆದುಕೊಂಡರು.
    ಜೆಡಿಎಸ್ ಪಕ್ಷದ ವರಿಷ್ಠರಾದ ಶಾರದ ಅಪ್ಪಾಜಿ ಶಿಬಿರಕ್ಕೆ ಚಾಲನೆ ನೀಡಿದರು. ಸದಸ್ಯೆ ಪಲ್ಲವಿ ಎಸ್ ದಿಲೀಪ್, ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ಜಿ.ಪಂ. ಮಾಜಿ ಸದಸ್ಯ ಎಸ್. ಕುಮಾರ್, ಮುಖಂಡರಾದ ಕ್ಲಬ್ ಸುರೇಶ್, ಶ್ರೀನಿವಾಸ್, ಯೋಗೇಶ್‌ಕುಮಾರ್ ಹಾಗು ಅಪ್ಪಾಜಿ ಅಭಿಮಾನಿ ಬಳಗದವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
       ವಿಕಲಚೇತನರು, ನಿರಾಶ್ರಿತರಿಗೆ ಉಚಿತ ಕ್ಷೌರ:
    ತಾಲೂಕು ಸವಿತಾ ಸಮಾಜ ಹಾಗು ನ್ಯೂಟೌನ್ ದಯಾಸಾಗರ್ ಟ್ರಸ್ಟ್ ವತಿಯಿಂದ ಎಂ.ಜೆ ಅಪ್ಪಾಜಿ ಸ್ಮರಣಾರ್ಥ ವಿಕಲಚೇತನರು, ನಿರಾಶ್ರಿತರಿಗೆ ಉಚಿತ ಕ್ಷೌರ ನೆರವೇರಿಸಲಾಯಿತು.
    ದಯಾಸಾಗರ್ ಟ್ರಸ್ಟ್ ಅಧ್ಯಕ್ಷ ಮೋಸಸ್ ರೋಸಯ್ಯ, ಸವಿತಾ ಸಮಾಜದ ಶಿವಶಂಕರ್, ಕೆ. ಗೋಪಾಲಕೃಷ್ಣ, ನರಸಿಂಹಮೂರ್ತಿ, ಬಿ.ಎನ್ ಮಹೇಶ್‌ಕುಮಾರ್, ರವಿಕುಮಾರ್, ಚಂದ್ರು, ಶಿವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಗೋಣಿಬೀಡಿನ ಅಪ್ಪಾಜಿ ಸಮಾದಿಗೆ ಪೂಜೆ :
    ಅಪ್ಪಾಜಿ ಕುಟುಂಬ ಅಧಿಕೃತವಾಗಿ ಸೆ.೨೧ರಂದು ಮೊದಲ ಪುಣ್ಯ ಸ್ಮರಣೆ ಆಚರಿಸಲಿದ್ದು, ಗುರುವಾರ ಅಭಿಮಾನಿಗಳು ಹಾಗು ಕಾರ್ಯಕರ್ತರೊಂದಿಗೆ ಗೋಣಿಬೀಡಿನ ಅಪ್ಪಾಜಿ ಸಮಾದಿಗೆ ವಿಶೇಷ ಪೂಜೆ ಸಲ್ಲಿಸುವ ಜೊತೆಗೆ ಅನ್ನಸಂತರ್ಪಣೆ ನೆರವೇರಿಸಿದರು. ಶಾರದ ಅಪ್ಪಾಜಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.


ಭದ್ರಾವತಿ ತಾಲೂಕು ಸವಿತಾ ಸಮಾಜ ಹಾಗು ನ್ಯೂಟೌನ್ ದಯಾಸಾಗರ್ ಟ್ರಸ್ಟ್ ವತಿಯಿಂದ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಮೊದಲ ಪುಣ್ಯಸ್ಮರಣೆ ನಡೆಯಿತು.

No comments:

Post a Comment