Thursday, September 9, 2021

ಹಿಂದೂ ಮಹಾಸಭಾ ಗಣಪತಿ ೯ ದಿನ ಪ್ರತಿಷ್ಠಾಪನೆ : ಜಿಲ್ಲಾಡಳಿತಕ್ಕೆ ಸಮಿತಿ ಮನವಿ

ಭದ್ರಾವತಿ ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ.
    ಭದ್ರಾವತಿ, ಸೆ. ೯: ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಈ ಬಾರಿ ೯ ದಿನಗಳ ಕಾಲ ಮೂರ್ತಿ ಪ್ರತಿಷ್ಠಾಪಿಸಲು ಸಮಿತಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ ಎಂದು ಸಮಿತಿ ಅಧ್ಯಕ್ಷ ವಿ. ಕದಿರೇಶ್ ತಿಳಿಸಿದ್ದಾರೆ.
    ಸಮಿತಿ ಸರ್ಕಾರ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧವಾಗಿದ್ದು, ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಈ ಬಾರಿ ಸಹ ವಿನಾಯಕ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿಗೆ ಶಿವಮೊಗ್ಗದಲ್ಲಿ ೧೦ ದಿನಗಳ ಕಾಲ ಪ್ರತಿಷ್ಠಾಪನೆಗೆ ಅವಕಾಶ ನೀಡಿದ ಸಂದರ್ಭದಲ್ಲಿ ಇಲ್ಲಿಯೂ ೯ ದಿನಗಳ ಕಾಲ ಪ್ರತಿಷ್ಠಾಪನೆಗೆ ಅವಕಾಶ ನೀಡುವಂತೆ ಕೋರಲಾಗಿದೆ.
    ಸರ್ಕಾರ ರಾಜ್ಯದ ಎಲ್ಲಾ ಕಡೆ ಪ್ರತಿಷ್ಠಾಪನೆಗೆ ಒಂದೇ ರೀತಿಯ ಅವಕಾಶ ನೀಡಿದ್ದಲ್ಲಿ ಅದಕ್ಕೂ ಬದ್ಧವಾಗಿರುವುದಾಗಿ ತಿಳಿಸಿದರು.

No comments:

Post a Comment