ಶನಿವಾರ, ಸೆಪ್ಟೆಂಬರ್ 25, 2021

ರಾಜೀವ್‌ಗಾಂಧಿ ಮೆಮೆರಿಯಲ್ ಪ್ರೌಢಶಾಲೆಯಲ್ಲಿ ಪೋಷಣ್ ಅಭಿಯಾನ್

ಭದ್ರಾವತಿ, ಸೆ. ೨೫ : ನಗರಸಭೆ ವ್ಯಾಪ್ತಿಯ ಹಳೇಸೀಗೆಬಾಗಿ ರಾಜೀವ್‌ಗಾಂಧಿ ಮೆಮೊರಿಯಲ್ ಪ್ರೌಢಶಾಲೆಯಲ್ಲಿ ಶನಿವಾರ 'ಪೋಷಣ್  ಅಭಿಯಾನ್' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ 'ಪೋಷಣ್ ಅಭಿಯಾನ್' ಮಹತ್ವ ಕುರಿತು ವಿವರಿಸಲಾಯಿತು. ಪೋಷಕಾಂಶ, ಖನಿಜ ಲವಣಗಳು, ನಾರುಪದಾರ್ಥ ಸೇರಿದಂತೆ ಮನುಷ್ಯನ ಆರೋಗ್ಯಕ್ಕೆ ಪೂರಕವಾದ ಅಂಶಗಳನ್ನು ಹೊಂದಿರುವ ಬಗೆ ಬಗೆಯ ಸೊಪ್ಪು, ತರಕಾರಿ, ಹಣ್ಣುಗಳ ಪ್ರದರ್ಶನ ಏರ್ಪಡಿಸಲಾಗಿತ್ತು.
ಹೊಸಮನೆ ಭಾಗದ ಸಂಪನ್ಮೂಲ ವ್ಯಕ್ತಿ ಕೃಷ್ಣಮೂರ್ತಿ, ಬಿ.ಎಡ್ ಕಾಲೇಜಿನ ಪ್ರಾಂಶುಪಾಲ ಹನುಮಂತಪ್ಪ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಗಂಗಾಧರಪ್ಪ, ಎಚ್.ಎನ್ ಪವಾರ್,  ಎಸ್. ಶ್ರೀನಿವಾಸಪ್ಪ, ಶಿವಕುಮಾರ್, ಡಾ. ಶಕೀಲ್ ಮಹಮದ್, ಚಂದ್ರಪ್ಪ, ಶಿವಕುಮಾರ್, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಪಿ.ಎಸ್ ನಾಗಲಕ್ಷ್ಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಸ್.ಎಸ್  ನಿರ್ಮಲ, ಗೀತಾಬಾಯಿ, ಅಂಗನವಾಡಿ ಹಾಗು  ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ