Saturday, October 2, 2021

ಶಾರದ ಅಪ್ಪಾಜಿ ಸಕ್ರಿಯ ರಾಜಕಾರಣಕ್ಕೆ ಪಾದಾರ್ಪಣೆ

ಭದ್ರಾವತಿ ತರೀಕೆರೆ ರಸ್ತೆಯಲ್ಲಿರುವ ಮಹಾತ್ಮಗಾಂಧಿ ಪ್ರತಿಮೆಗೆ ಶನಿವಾರ ಶಾರದ ಅಪ್ಪಾಜಿ ಮಾಲಾರ್ಪಣೆ ಮಾಡುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಪಾದಾರ್ಪಣೆ ಮಾಡಿದರು.
    ಭದ್ರಾವತಿ: ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರ ಪತ್ನಿ ಶಾರದ ಅಪ್ಪಾಜಿ ಶನಿವಾರ ಗಾಂಧಿ ಜಯಂತಿಯಂದು ನಗರದ ತರೀಕೆರೆ ರಸ್ತೆಯಲ್ಲಿರುವ ಮಾಹತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಕ್ರಿಯ ರಾಜಕಾರಣಕ್ಕೆ ಪಾದಾರ್ಪಣೆ ಮಾಡಿದರು.
    ಸೆ.೨೧ರಂದು ತಾಲೂಕಿನ ಗೋಣಿಬೀಡಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಎಂ.ಜೆ ಅಪ್ಪಾಜಿ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಮುಂಬರುವ ವಿಧಾನಸಭಾ ಚುನಾವಣೆಗೆ ಶಾರದ ಅಪ್ಪಾಜಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದ ನಂತರ ಇದೆ ವೇದಿಕೆಯಲ್ಲಿ ಮಾತನಾಡಿದ, ಶಾರದ ಅಪ್ಪಾಜಿ ಅ.೨ರ ಗಾಂಧಿ ಜಯಂತಿಯಂದು ಮಹಾತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮುಂದಿನ ಸಕ್ರಿಯ ರಾಜಕಾರಣಕ್ಕೆ ಪಾದಾರ್ಪಣೆ ಮಾಡುವುದಾಗಿ ಘೋಷಿಸಿದ್ದರು. ಅದರಂತೆ ಮಹಾತ್ಮಗಾಂಧಿ ವೃತ್ತದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮುಂದಿನ ರಾಜಕೀಯ ಜೀವನ ಪತಿ ಅಪ್ಪಾಜಿಯವರ ಆದರ್ಶತನಗಳನ್ನು ಮೈಗೂಡಿಸಿಕೊಂಡು ಮುನ್ನಡೆಯುತ್ತೇನೆ ಎಂದರು.
    ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ಜೆಡಿಎಸ್ ಪಕ್ಷದ ನಗರಸಭಾ ಸದಸ್ಯರು, ಮುಖಂಡರು ಹಾಗು ಕಾರ್ಯಕರ್ತರು ಪಾಲ್ಗೊಂಡಿದ್ದರು.

No comments:

Post a Comment