Tuesday, October 26, 2021

ಭಾರ ಎತ್ತುವ ಸ್ಪರ್ಧೆಯಲ್ಲಿ ಪ್ರಾಧ್ಯಾಪಕ ವರದರಾಜ್‌ಗೆ ಎರಡು ಬೆಳ್ಳಿ ಪದಕ


ಎಸ್. ವರದರಾಜ್

    ಭದ್ರಾವತಿ, ಅ. ೨೬: ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಎಸ್. ವರದರಾಜ್ ದಾವಣಗೆರೆಯಲ್ಲಿ ಜರುಗಿದ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ೨ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.
    ಭಾರ ಎತ್ತುವ ಸ್ಪರ್ಧೆಯ ೭೫ ರಿಂದ ೮೨ ಕೆ.ಜಿ ಪುರುಷರ ವಿಭಾಗದಲ್ಲಿ ಸ್ನಾಚ್‌ನಲ್ಲಿ ೬೫ ಕೆ.ಜಿ ಹಾಗು ಕ್ಲೀನ್ ಅಂಡ್ ಜರ್ಕ್‌ನಲ್ಲಿ ೭೫ ಕೆ.ಜಿ ಒಟ್ಟು ೧೪೦ ಕೆ.ಜಿ ಭಾರ ಎತ್ತುವ ಮೂಲಕ ದ್ವಿತೀಯ ಸ್ಥಾನ ಹಾಗು ದೇಹದಾರ್ಢ್ಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನದೊಂದಿಗೆ ಒಟ್ಟು ಎರಡು ಬೆಳ್ಳಿ ಪದಕ ಪಡೆದುಕೊಂಡು ರಾಷ್ಟ್ರ ಮಟಕ್ಕೆ ಆಯ್ಕೆಯಾಗಿದ್ದಾರೆ.
    ವರದರಾಜ್‌ರವರು ರಾಜ್ಯಮಟ್ಟದಲ್ಲಿ ಕಳೆದ ೫ ವರ್ಷಗಳಿಂದ ನಿರಂತರವಾಗಿ ಸಾಧನೆ ಮಾಡುವ ಮೂಲಕ ಕೀರ್ತಿ ತಂದಿದ್ದಾರೆ. ಕಾಲೇಜಿನ ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

No comments:

Post a Comment