ಕೆಂಚಮ್ಮ ಹೋಬಳಿದಾರ್ ಸಗನಪ್ಪ
ಭದ್ರಾವತಿ, ಅ. ೩೦: ಹಳೇನಗರದ ಶ್ರೀ ಹಳದಮ್ಮ ದೇವಿ ರಸ್ತೆಯ ನಿವಾಸಿ, ಕನಕ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಗೋಪಿ ಅವರ ತಾಯಿ ಕೆಂಚಮ್ಮ ಹೋಬಳಿದಾರ್ ಸಗನಪ್ಪ(೭೮) ಶನಿವಾರ ನಿಧನ ಹೊಂದಿದರು.
೪ ಜನ ಗಂಡು ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳನ್ನು ಹೊಂದಿದ್ದರು. ಇವರ ಅಂತ್ಯಕ್ರಿಯೆ ಭಾನುವಾರ ನಡೆಯಲಿದೆ.
ಇವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್, ತಾಲೂಕು ಛಾಯಾಗ್ರಾಹಕರ ಸಂಘದ ಅಧ್ಯಕ್ಷ, ತಾಲೂಕು ಕುರುಬರ ಸಂಘದ ಸಹಕಾರ್ಯದರ್ಶಿ ಶ್ರೀನಿವಾಸ್ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.
No comments:
Post a Comment