Saturday, October 2, 2021

ಅಂಧರ ಕೇಂದ್ರದಲ್ಲಿ ಮಹಾತ್ಮ ಗಾಂಧಿ ಜಯಂತಿ, ಪುಣ್ಯಸ್ಮರಣೆ

ಭದ್ರಾವತಿ ನಗರಸಭೆ ಮಾಜಿ ಸದಸ್ಯ, ಕಡದಕಟ್ಟೆ ನಿವಾಸಿ ಜಿ. ಸುರೇಶಯ್ಯ ಅವರ ತಂದೆ ದೊಡ್ಡಘಟ್ಟ ಮಠದ ಕೆ. ಗುರುಮೂರ್ತಯ್ಯನವರ ೩ನೇ ವರ್ಷದ ಪುಣ್ಯಸ್ಮರಣೆ ಹಾಗು ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ನಗರದ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ನಡೆಯಿತು.
    ಭದ್ರಾವತಿ, ಅ. ೨: ನಗರಸಭೆ ಮಾಜಿ ಸದಸ್ಯ, ಕಡದಕಟ್ಟೆ ನಿವಾಸಿ ಜಿ. ಸುರೇಶಯ್ಯ ಅವರ ತಂದೆ ದೊಡ್ಡಘಟ್ಟ ಮಠದ ಕೆ. ಗುರುಮೂರ್ತಯ್ಯನವರ ೩ನೇ ವರ್ಷದ ಪುಣ್ಯಸ್ಮರಣೆ ಹಾಗು ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ನಗರದ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ನಡೆಯಿತು.
    ವಿಕಲಚೇತನರೊಂದಿಗೆ ವಿಶೇಷವಾಗಿ ಪುಣ್ಯಸ್ಮರಣೆ ಆಚರಿಸುವುದರೊಂದಿಗೆ ರಾತ್ರಿ ವೇಳೆ ಚಳಿಯಿಂದ ರಕ್ಷಣೆ ಪಡೆಯಲು ಅಗತ್ಯವಿರುವ ಹೊದಿಕೆಗಳನ್ನು ವಿತರಿಸಲಾಯಿತು.
    ಜೇಡಿಕಟ್ಟೆ ಶ್ರೀ ಮರುಳಸಿದ್ದೇಶ್ವರ ಜನಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ, ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಅಧ್ಯಕ್ಷ, ಸೂಡಾ ಸದಸ್ಯ ರಾಮಲಿಂಗಯ್ಯ, ನಿವೃತ್ತ ಮುಖ್ಯ ಶಿಕ್ಷಕ ಮರುಳಯ್ಯ, ನಗರಸಭೆ ಮಾಜಿ ಸದಸ್ಯ ಸುರೇಶಯ್ಯ ಹಾಗು ಕುಟುಂಬ ವರ್ಗದವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸಿದ್ದಾರ್ಥ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ ಅಧ್ಯಕ್ಷತೆ ವಹಿಸಿದ್ದರು.

No comments:

Post a Comment