ಭದ್ರಾವತಿ ತಾಲೂಕು ವಕೀಲರ ಸಂಘಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಪದಾಧಿಕಾರಿಗಳನ್ನು ವಕೀಲರು ಅಭಿನಂದಿಸಿದರು.
ಭದ್ರಾವತಿ, ಅ. ೨೨: ತಾಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ಕೆ.ಎನ್ ಶ್ರೀಹರ್ಷ ಶುಕ್ರವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.
೨ ವರ್ಷ ಅವಧಿಯ ಸಂಘದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೆ.ಎನ್ ಶ್ರೀಹರ್ಷ ಹಾಗು ಬಿ.ಸಿ ಕೇಶವಮೂರ್ತಿ ಸ್ಪರ್ಧಿಸಿದ್ದು, ಈ ಪೈಕಿ ಹರ್ಷ ೯೮ ಮತಗಳನ್ನು ಹಾಗು ಕೇಶವಮೂರ್ತಿ ೮೦ ಮತಗಳನ್ನು ಪಡೆದುಕೊಂಡಿದ್ದಾರೆ. ಒಟ್ಟು ೧೮ ಮತಗಳ ಅಂತರದಿಂದ ಹರ್ಷ ಗೆಲುವು ಸಾಧಿಸಿದ್ದಾರೆ. ಉಳಿದಂತೆ ಉಪಾಧ್ಯಕ್ಷರಾಗಿ ಡಿ.ಎಂ ವಿಶ್ವನಾಥ್, ಕಾರ್ಯದರ್ಶಿಯಾಗಿ ಉದಯಕುಮಾರ್ ಮತ್ತು ಜಂಟಿ ಕಾರ್ಯದರ್ಶಿಯಾಗಿ ಮಂಜಪ್ಪ ಆಯ್ಕೆಯಾಗಿದ್ದಾರೆ.
ಒಟ್ಟು ೧೮೫ ಸದಸ್ಯರ ಪೈಕಿ ೧೭೮ ಸದಸ್ಯರು ಮತ ಚಲಾಯಿಸಿದರು. ಬೆಳಿಗ್ಗೆ ೧೧ ಗಂಟೆಯಿಂದ ಸಂಜೆ ೪ ಗಂಟೆವರೆಗೆ ಮತದಾನ ನಡೆಯಿತು. ಸೈಯದ್ ನಿಯಾಜ್, ಉಮಾಶಂಕರ್ ಮತ್ತು ಕೂಡ್ಲಿಗೆರೆ ಮಂಜುನಾಥ್ ಚುನಾವಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದರು.
No comments:
Post a Comment