Saturday, October 2, 2021

ಕಡಜ ಹುಳುಗಳ ದಾಳಿಗೆ ಇಬ್ಬರು ಬಲಿ

ಕಡಜ ಹುಳುಗಳ ದಾಳಿಯಿಂದ ಮೃತಪಟ್ಟ ಸಿ.ಬಿ ನಂಜಪ್ಪ
    ಭದ್ರಾವತಿ, ಅ. ೨: ಜಮೀನಿಗೆ ಹೋಗಿ ಬರುವಾಗ ಕಡಜದ ಹುಳು ಕಚ್ಚಿದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ನಗರಸಭೆ ವ್ಯಾಪ್ತಿಯ ಆನೆಕೊಪ್ಪ ಎಂಪಿಎಂ ಬಡಾವಣೆಯಲ್ಲಿ ಬಳಿ ನಡೆದಿದೆ.
    ಹೊಸ ಬುಳ್ಳಾಪುರ ನಿವಾಸಿ ಸಿ.ಬಿ ನಂಜಪ್ಪ(೫೦) ಹಾಗು ತರೀಕೆರೆ ಸಿದ್ಲಿಪುರ ಗ್ರಾಮದ ನಿವಾಸಿ ಮಲ್ಲಿಕಾ(೫೫) ಮೃತಪಟ್ಟಿದ್ದು, ಶುಕ್ರವಾರ ಬೆಳಿಗ್ಗೆ ಸಿ.ಬಿ ನಂಜಪ್ಪ ಮತ್ತು ಇವರ ಜಮೀನನಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ಮಲ್ಲಿಕಾ ಇಬ್ಬರು ದ್ವಿಚಕ್ರವಾಹನದಲ್ಲಿ ಬರುತ್ತಿದ್ದಾಗ ಕಡಜದ ಹುಳುಗಳು ದಾಳಿ ನಡೆಸಿವೆ. ಇದರಿಂದಾಗಿ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
    ಸಿ.ಬಿ ನಂಜಪ್ಪ ಅವರು ಬಹಳ ವರ್ಷಗಳಿಂದ ಕಾಗದನಗರದಲ್ಲಿ ಹಿಟ್ಟಿನ ಗಿರಣಿ ಮುನ್ನಡೆಸಿಕೊಂಡು ಹೋಗುತ್ತಿದ್ದರು. ಜೊತೆಗೆ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಇವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಹೊಂದಿದ್ದರು. ಶನಿವಾರ ಸಂಜೆ ಇವರ ಅಂತ್ಯಸಂಸ್ಕಾರ ನೆರವೇರಿತು.
    ಮೃತರ ನಿಧನಕ್ಕೆ ಎಂಪಿಎಂ ಕಾರ್ಮಿಕರ ಕುಟುಂಬ ವರ್ಗದವರು, ಸ್ಥಳೀಯ ಗಣ್ಯರು ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.

No comments:

Post a Comment