ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ವತಿಯಿಂದ ತಂಬಾಕು ನಿಯಂತ್ರಣ ಕಾನೂನು ಕೋಟ್ಪಾ ೨೦೦೩ ಅಡಿಯಲ್ಲಿ ಭದ್ರಾವತಿ ತಾಲೂಕಿನ ಬಾರಂದೂರು ಗ್ರಾಮದಲ್ಲಿ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿರುವ ಘಟನೆ ಮಂಗಳವಾರ ನಡೆದಿದೆ.
ಭದ್ರಾವತಿ, ಅ. ೨೬: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ವತಿಯಿಂದ ತಂಬಾಕು ನಿಯಂತ್ರಣ ಕಾನೂನು ಕೋಟ್ಪಾ ೨೦೦೩ ಅಡಿಯಲ್ಲಿ ತಾಲೂಕಿನ ಬಾರಂದೂರು ಗ್ರಾಮದಲ್ಲಿ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿರುವ ಘಟನೆ ಮಂಗಳವಾರ ನಡೆದಿದೆ.
ಒಟ್ಟು ೧,೮೦೦ ರು. ದಂಡ ವಿಧಿಸುವ ಜೊತೆಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ವ್ಯಾಪಾರಸ್ಥರಿಗೆ ಹಾಗು ಖರೀದಿ ಮಾಡುವವರಿಗೆ ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಕಾರ್ಯಾಚರಣೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ತಾಲೂಕ್ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಟಿ ರಾಜೇಗೌಡ, ಎಚ್ಐಓ ಆನಂದಮೂರ್ತಿ, ಕಾಗದನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಇ.ಓ ಮಂಜುನಾಥ್, ಆರಕ್ಷಕ ಸಿಬ್ಬಂದಿ ಎಲ್ಲಪ್ಪ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಹೇಮಂತ್ರಾಜ್, ರವಿರಾಜ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಅಲ್ಲಾವುದ್ದೀನ್ ತಾಜ್ ಮತ್ತು ಶಶಿಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment