Monday, October 4, 2021

ವಿಇಎಸ್ ವಿದ್ಯಾಸಂಸ್ಥೆಯಲ್ಲಿ ಮಹಾತ್ಮಗಾಂಧಿ, ಲಾಲ್‌ಬಹದ್ದೂರು ಶಾಸ್ತ್ರಿ ಜಯಂತಿ


ಭದ್ರಾವತಿ ಹೊಸಸೇತುವೆ ರಸ್ತೆಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಮತ್ತು 'ಲೋಕ್ ಅದಾಲತ್' ಉಪಯೋಗಗಳ ಕುರಿತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಎಂ.ಇ .ಮೋಹನ್ ಗೌಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಭದ್ರಾವತಿ, ಅ. ೪: ನಗರದ ಹೊಸಸೇತುವೆ ರಸ್ತೆಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಶ್ರಿತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಮತ್ತು 'ಲೋಕ್ ಅದಾಲತ್' ಉಪಯೋಗಗಳ ಕುರಿತ ಕಾರ್ಯಕ್ರಮ ಆಯೋಜಿಸಲಾಗಿತ್ತು.
    ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಎಂ.ಇ .ಮೋಹನ್ ಗೌಡ ಮಹಾತ್ಮ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, 'ಲೋಕ್ ಅದಾಲತ್' ಉಪಯೋಗಗಳ ಕುರಿತು ಮಾಹಿತಿ ನೀಡುವ ಜೊತೆಗೆ ಉಚಿತ ಕಾನೂನು ಸೇವೆಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕರೆ ನೀಡಿದರು.
    ಬಿ.ಇಡಿ ವಿಭಾಗದ ಉಪನ್ಯಾಸಕಿ ಚೈತ್ರರವರು ಮಹಾತ್ಮ ಗಾಂಧಿ ಅವರ ತತ್ವ ಮತ್ತು ಆದರ್ಶಗಳನ್ನು ಕುರಿತ ಮಾತನಾಡಿದರು. 
    ವಕೀಲರ ಸಂಘದ ಕಾರ್ಯದರ್ಶಿ ಟಿ.ಎಸ್ ರಾಜು, ಖಜಾಂಚಿ ಎನ್. ರಂಗಪ್ಪ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಮಾಹಿತಿ ನೀಡಿದರು.  ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಅಧ್ಯಕ್ಷ ಬಿ. ಸಿದ್ದಬಸಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್ ಬಸವರಾಜ್, ಶಿವಾಜಿರಾವ್, ಸಿಆರ್‌ಪಿ ಸುನಿತಾ, ಪ್ರತಿಭಾ, ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಡಾ. ಎಸ್.ಪಿ. ರಾಕೇಶ್, ಪಿಯು ವಿಭಾಗಗಳ ಪ್ರಾಂಶುಪಾಲ ವರದರಾಜ ಹಾಗೂ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
    ವಿದ್ಯಾ ಸಂಸ್ಥೆಯ ಸಂಸ್ಥಾಪಕ ಛೇರ್ಮನ್ ಬಿ.ಎಲ್ ರಂಗಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಆಡಳಿತಧಿಕಾರಿ ಶಿವಲಿಂಗೇಗೌಡ  ಸ್ವಾಗತಿಸಿದರು.  ಆಶಾ ಪ್ರಾರ್ಥಿಸಿದರು. ಉಪನ್ಯಾಸಕಿ ಶೋಭಾ ನಿರೂಪಿಸಿ, ವೀಣಾ ವಂದಿಸಿದರು.

No comments:

Post a Comment