ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ ರಾಜ್ಯದಲ್ಲಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ ನೀಡುವಂತೆ ಆಗ್ರಹಿಸಿ ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಸೋಮವಾರ ಭದ್ರಾವತಿ ತಾಲೂಕು ಕಛೇರಿ ಮಿನಿ ವಿಧಾನಸೌಧದ ಮುಂಭಾಗ ಏಕಾಂಗಿ ಹೋರಾಟ ನಡೆಸಿದರು.
ಭದ್ರಾವತಿ, ಅ. ೨೫: ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ ರಾಜ್ಯದಲ್ಲಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ ನೀಡುವಂತೆ ಆಗ್ರಹಿಸಿ ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಸೋಮವಾರ ತಾಲೂಕು ಕಛೇರಿ ಮಿನಿ ವಿಧಾನಸೌಧದ ಮುಂಭಾಗ ಏಕಾಂಗಿ ಹೋರಾಟ ನಡೆಸುವ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿದ್ದಾರೆ.
ಸರ್ವೋಚ್ಛ ನ್ಯಾಯಾಲಯ ಪಟಾಕಿ ಮಾರಾಟಕ್ಕೆ ಸಂಬಂಧಿಸಿದಂತೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಹಾಗು ಪರಿಸರಕ್ಕೆ ಹಾನಿ ಉಂಟು ಮಾಡುವ ೨೦೧೭ಕ್ಕೂ ಮೊದಲು ತಯಾರಿಸುತ್ತಿದ್ದ ಪಟಾಕಿ ಸಂಪೂರ್ಣವಾಗಿ ನಿಷೇಧಿಸುವಂತೆ ಆದೇಶಿಸಿದೆ. ಆದರೆ ಪಟಾಕಿ ತಯಾರಿಸುವ ಕಂಪನಿಗಳು ಮತ್ತು ಮಾರಾಟಗಾರರು ಆದೇಶವನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಿದರು.
ಹಸಿರು ಪಟಾಕಿಯಿಂದ ಪರಿಸರಕ್ಕೆ ಹೆಚ್ಚಿನ ಹಾನಿ ಉಂಟಾಗುವುದಿಲ್ಲ. ಅಲ್ಲದೆ ಆರೋಗ್ಯದ ಮೇಲೆ ಸಹ ಹೆಚ್ಚಿನ ದುಷ್ಪರಿಣಾಮ ಉಂಟಾಗುವುದಿಲ್ಲ. ಅಲ್ಲದೆ ಕೇಂದ್ರ ಸರ್ಕಾರದ ಮಾಲಿನ್ಯ ನಿಯಂತ್ರಣ ಮಂಡಳಿ ಪಿ.ಇ.ಎಸ್.ಓ ಹಸಿರು ಪಟಾಕಿ ಮಾರಾಟಕ್ಕೆ ಒಪ್ಪಿಗೆ ಸೂಚಿಸಿದೆ. ಈ ಹಿನ್ನಲೆಯಲ್ಲಿ ಮಾರಾಟಗಾರರಿಗೆ ಕೇವಲ ಹಸಿರು ಪಟಾಕಿ ಮಾತ್ರ ಮಾರಾಟ ಮಾಡುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಮೂಲಕ ಸೂಚಿಸಬೇಕೆಂದು ಒತ್ತಾಯಿಸಿದರು.
No comments:
Post a Comment