ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕ ಸಂಘಟನಾತ್ಮಕವಾಗಿ ಹೆಚ್ಚು ಬಲಗೊಳ್ಳುತ್ತಿದ್ದು, ಹೆಚ್ಚಿನ ಜವಾಬ್ದಾರಿ ಹಿನ್ನಲೆಯಲ್ಲಿ ನೂತನ ಅಧ್ಯಕ್ಷರುಗಳನ್ನು ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ನೇತೃತ್ವದಲ್ಲಿ ನೇಮಕ ಮಾಡಲಾಯಿತು.
ಭದ್ರಾವತಿ, ಅ. ೧೩: ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಶಿವಮೊಗ್ಗ ತಾಲೂಕು ಅಧ್ಯಕ್ಷರಾಗಿ ಗಂಗಾವತಿ ನೇಮಕಗೊಂಡಿದ್ದಾರೆ.
ಮಹಿಳಾ ಘಟಕ ಸಂಘಟನಾತ್ಮಕವಾಗಿ ಹೆಚ್ಚು ಬಲಗೊಳ್ಳುತ್ತಿದ್ದು, ಹೆಚ್ಚಿನ ಜವಾಬ್ದಾರಿ ಹಿನ್ನಲೆಯಲ್ಲಿ ನೂತನ ಅಧ್ಯಕ್ಷರುಗಳನ್ನು ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ನೇತೃತ್ವದಲ್ಲಿ ನೇಮಕ ಮಾಡಲಾಗಿದೆ.
ಶಿವಮೊಗ್ಗ ತಾಲೂಕು ನೂತನ ಅಧ್ಯಕ್ಷರಾಗಿ ಗಂಗಾವತಿ, ಶಿವಮೊಗ್ಗ ನಗರ ಘಟಕದ ನೂತನ ಅಧ್ಯಕ್ಷರಾಗಿ ಜ್ಯೋತಿ ರಂಗನಾಥ್ ಹಾಗು ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ವೇದಾ ಅವರನ್ನು ನೇಮಕಗೊಳಿಸಿದ್ದು, ಸಂಘಟನೆಯ ತತ್ವ, ಸಿದ್ದಾಂತಗಳಿಗೆ ಬದ್ಧರಾಗಿ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ಸೂಚಿಸಿದ್ದಾರೆ.
ನೂತನ ಅಧ್ಯಕ್ಷರುಗಳನ್ನು ಜಿಲ್ಲಾ ಘಟಕದ ವತಿಯಿಂದ ಅಭಿನಂದಿಸಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾರದಾ. ಭದ್ರಾವತಿ ತಾಲೂಕು ಅಧ್ಯಕ್ಷೆ ಮಹೇಶ್ವರಿ, ಉಪಾಧ್ಯಕ್ಷೆ ಗೌರಮ್ಮ, ಸಂಘಟನಾ ಕಾರ್ಯದರ್ಶಿ ನಾಗರತ್ನ. ಜಿಲ್ಲಾ ಕಾರ್ಯದರ್ಶಿ ಪವಿತ್ರ, ರೂಪ, ಸುಮತಿ, ರುಕ್ಮಿಣಿ, ರೇಣುಕಾ, ಯಾಸ್ಮಿನ್, ರೇಖಾ, ಸುಧಾ, ನಳಿನಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment