Saturday, October 23, 2021

ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧಕ್ಕೆ ಖಂಡನೆ : ಪಂಜಿನ ಮೆರವಣಿಗೆ

ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ನರಮೇಧ ಖಂಡಿಸಿ ಶನಿವಾರ ಸಂಜೆ ಯುವ ಬ್ರಿಗೇಡ್ ವತಿಯಿಂದ ಪಂಚಿನ ಪಂಜಿನ ಮೆರವಣಿಗೆ ನಡೆಸಲಾಯಿತು.
    ಭದ್ರಾವತಿ, ಸೆ. ೨೩: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ನರಮೇಧ ಖಂಡಿಸಿ ಶನಿವಾರ ಸಂಜೆ ಯುವ ಬ್ರಿಗೇಡ್ ವತಿಯಿಂದ ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು.
    ಕೆಎಸ್‌ಆರ್‌ಸಿ ಮುಖ್ಯ ಬಸ್ ನಿಲ್ದಾಣದಿಂದ ಅಂಬೇಡ್ಕರ್ ವೃತ್ತದ ವರೆಗೂ ಪಂಜಿನ ಮೆರವಣಿಗೆ ನಡೆಸಿ ಹಿಂದೂಗಳ ನೆರಮೇಧವನ್ನು ತೀವ್ರವಾಗಿ ಖಂಡಿಸಲಾಯಿತು. ಅಲ್ಲದೆ ಮೇಣದ ಬತ್ತಿ ಹಚ್ಚಿ ಬಲಿಯಾಗಿರುವ ಅಮಾಯಕ ಹಿಂದೂಗಳ ಆತ್ಮಕ್ಕೆ ಶಾಂತಿ ಕೋರಲಾಯಿತು.
    ಕರ್ನಾಟಕ ರಾಮ್ ಸೇನಾ ಸಂಘಟನೆ ಜಿಲ್ಲಾಧ್ಯಕ್ಷ ಉಮೇಶ್‌ಗೌಡ, ತಾಲೂಕು ಅಧ್ಯಕ್ಷ ಸಚಿನ್ ಎಂ. ವರ್ಣೇಕರ್, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಧನುಷ್ ಬೋಸ್ಲೆ, ಯುವ ಬ್ರಿಗೇಡ್ ತಾಲೂಕು ಸಂಚಾಲಕ ಮೋಹನ್ ಕುಮಾರ್, ದರ್ಶನ್, ಸಂಜು, ಮಂಜುನಾಥ್, ಶ್ರೇಯಸ್, ಕೃಷ್ಣ, ಜೋಗಿ, ರಮೇಶ್, ಪ್ರಭು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

No comments:

Post a Comment