ಭದ್ರಾವತಿ ಬೈಪಾಸ್ ರಸ್ತೆ ಉಜ್ಜನಿಪುರದಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬಂದ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿರುವುದು.
ಭದ್ರಾವತಿ, ನ. ೨೭: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಸುಮಾರು ೭ ವರ್ಷದ ಮಗು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶನಿವಾರ ನಗರದ ಬೈಪಾಸ್ ರಸ್ತೆ ಉಜ್ಜನಿಪುರದಲ್ಲಿ ನಡೆದಿದೆ.
ಬೈಕ್ ಸವಾರ ಶಿವಮೊಗ್ಗ ಮಿಳ್ಳಘಟ್ಟದ ನಿವಾಸಿ ಎಂದು ಗುರುತಿಸಲಾಗಿದ್ದು, ಈತ ಪತ್ನಿ ಹಾಗು ಇಬ್ಬರು ಮಕ್ಕಳೊಂದಿಗೆ ದ್ವಿಚಕ್ರ ವಾಹನದಲ್ಲಿ ಕಾರ್ಯ ನಿಮಿತ್ತ ಚಿಕ್ಕಮಗಳೂರಿಗೆ ತೆರಳಿದ್ದು, ಪುನಃ ಹಿಂದಿರುಗಿ ಶಿವಮೊಗ್ಗಕ್ಕೆ ಹೋಗುವಾಗ ಉಜ್ಜನಿಪುರ ಎಂಪಿಎಂ ಬಡಾವಣೆ ಬಳಿ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಇದರಿಂದಾಗಿ ಈತನಿಗೆ ಗಂಬೀರ ಗಾಯಗಳಾಗಿದ್ದು, ಉಳಿದಂತೆ ಪತ್ನಿ ಮತ್ತು ಇನ್ನೊಂದು ೩ ವರ್ಷದ ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಕಾಗದನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ