ಭದ್ರಾವತಿ ಹಳೆನಗರದ ಶ್ರೀ ರಾಮೇಶ್ವರಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಗುರುವಾರ ೨೫ನೇ ವರ್ಷದ ಶ್ರೀ ಚಿದಂಬರ ಜಯಂತಿ ವಿಜೃಂಭಣೆಯಿಂದ ನೆರವೇರಿತು.
ಭದ್ರಾವತಿ, ನ. ೨೫: ಹಳೆನಗರದ ಶ್ರೀ ರಾಮೇಶ್ವರಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಗುರುವಾರ ೨೫ನೇ ವರ್ಷದ ಶ್ರೀ ಚಿದಂಬರ ಜಯಂತಿ ವಿಜೃಂಭಣೆಯಿಂದ ನೆರವೇರಿತು.
ಜಯಂತಿ ಅಂಗವಾಗಿ ಬೆಳಿಗ್ಗೆ ಕಾಕಡಾರತಿ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಸಹಸ್ರನಾಮ ಹಾಗೂ ಶ್ರೀ ಚಿದಂಬರ ಮೂಲಮಂತ್ರ ಹೋಮ, ರಾಜಬೀದಿ ಉತ್ಸವ ಮತ್ತು ಮಹಾಮಂಗಳಾರತಿ, ಪೂರ್ಣಾಹುತಿ, ಶ್ರೀ ಚಿದಂಬರ ತೊಟ್ಟಿಲು ಸೇವೆ ಹಾಗೂ ಹಾಗೂ ಲಲಿತ ಮಹಿಳಾ ಮಂಡಳಿಯಿಂದ ದೀಪೋತ್ಸವ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ಚಿದಂಬರ ಸೇವಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ ದೇಶಪಾಂಡೆ, ಪ್ರಧಾನ ಕಾರ್ಯದರ್ಶಿ ಇಂದ್ರಸೇನರಾವ್, ಉಪಾಧ್ಯಕ್ಷ ಮಂಜುನಾಥ್, ಖಜಾಂಚಿ ಜೆ.ಎಂ ಬಾಲಚಂದ್ರ ಗುತ್ತಲ್, ಆನಂದರಾವ್, ಪ್ರಭಾಕರರಾವ್, ರಾಮಚಂದ್ರ, ದತ್ತಾತ್ರಿ, ವಾಸುದೇವ್, ರಾಜಣ್ಣ ಸೇರಿದಂತೆ ಇನ್ನಿತರ ಭಕ್ತಾಧಿಗಳು ಪಾಲ್ಗೊಂಡಿದ್ದರು.
No comments:
Post a Comment