ಭದ್ರಾವತಿ, ನ. ೭; ಚಿಕ್ಕಮಗಳೂರು ಪ್ರಧಾನ ಸಿವಿಲ್ ನ್ಯಾಯಾಲಯದ ಶಿರಸ್ತೆದಾರ್ ಅವರ ಕಾರು ಅಪಘಾತಗೊಂಡಿರುವ ಘಟನೆ ತಾಲೂಕಿನ ಕೆಂಪೇಗೌಡ ನಗರದಲ್ಲಿ ನಡೆದಿದೆ.
ಕೆಂಪೇಗೌಡ ನಗರದ ಬಳಿ ಬಿ.ಎಚ್ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ರಸ್ತೆಯಲ್ಲಿ ಹಂಪ್ಸ್ ಎದುರಾದ ಹಿನ್ನೆಲೆಯಲ್ಲಿ ಶಿರಸ್ತೆದಾರ್ ಹಾಲನಾಯ್ಕ ಅವರ ಕಾರು ನಿಧನವಾಗಿ ಚಲಿಸುತ್ತಿದ್ದಾಗ ಹಿಂಬದಿಯಿಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಈ ಹಿನ್ನಲೆಯಲ್ಲಿ ಕಾರು ಖಜಂಗೊಂಡಿದ್ದು, ಆದರೆ ಕಾರಿನಲ್ಲಿದ್ದ ಹಾಲನಾಯ್ಕ ಅವರ ಕುಟುಂಬಸ್ಥರಿಗೆ ಯಾವುದೇ ಪ್ರಾಣ ಹಾನಿಯಾಗಿಲ್ಲ.
ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಹಾಲನಾಯ್ಕ ಕುಟುಂಬದವರು ಭದ್ರಾವತಿಗೆ ಆಗಮಿಸಿದ್ದರು ಎನ್ನಲಾಗಿದೆ. ಲಾರಿ ಚಾಲಕ ಪರಾರಿಯಾಗಿದ್ದು, ಅಪಘಾತ ಸಂಬಂಧ ಕಾಗದನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
No comments:
Post a Comment