Friday, November 12, 2021

ಮಿತಿ ಮೀರಿದ ಮಾದಕ ವಸ್ತುಗಳ ಮಾರಾಟ, ಸೇವನೆ : ಸೂಕ್ತ ಕ್ರಮ ಕೈಗೊಳ್ಳಿ

ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಪೊಲೀಸ್ ಉಪಾಧೀಕ್ಷಕರಿಗೆ ಮನವಿ


ಭದ್ರಾವತಿ ತಾಲೂಕಿನಾದ್ಯಂತ ಮಾದಕ ವಸ್ತುಗಳ ಮಾರಾಟ ಹಾಗು ಸೇವನೆ ಹೆಚ್ಚಾಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಪೊಲೀಸ್ ಉಪಾಧೀಕ್ಷಕರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ನ. ೧೨: ತಾಲೂಕಿನಾದ್ಯಂತ ಮಾದಕ ವಸ್ತುಗಳ ಮಾರಾಟ ಹಾಗು ಸೇವನೆ ಹೆಚ್ಚಾಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಪೊಲೀಸ್ ಉಪಾಧೀಕ್ಷಕರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
    ತಾಲೂಕಿನಾದ್ಯಂತ ಮಾದಕ ವಸ್ತುಗಳ ಮಾರಾಟ ಹಾಗು ಸೇವನೆ ಹೆಚ್ಚಾಗುತ್ತಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಹ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ.  ಯುವ ಸಮುದಾಯದವರು ದಾರಿ ತಪ್ಪುತ್ತಿದ್ದು, ಮಾದಕ ವಸ್ತುಗಳನ್ನು ಮಾರಾಟ ಮಾಡುವವರನ್ನು ಯಾರು ಸಹ ಪ್ರಶ್ನಿಸದಂತಹ ವಾತಾವರಣ ನಿರ್ಮಾಣವಾಗುತ್ತಿದೆ. ಜೊತೆಗೆ ಮಾರಾಕಾಸ್ತ್ರಗಳ ಬಳಕೆ ಸಹ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
    ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಎನ್. ಅಫ್ತಾಬ್ ಅಹಮದ್, ಉಪಾಧ್ಯಕ್ಷ ತಬ್ರೇಜ್ ಖಾನ್, ಪ್ರಧಾನ ಕಾರ್ಯದರ್ಶಿ ಸಜ್ಜಾದ್, ಅಮೋಸ್, ಜಬಿವುಲ್ಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment