Thursday, November 11, 2021

ಕೋಟ್ಪಾ ಕಾಯ್ದೆಯಡಿ ಕಾರ್ಯಾಚರಣೆ : ೫,೧೦೦ ರು. ದಂಡ ವಸೂಲಾತಿ


ಶಿವಮೊಗ್ಗ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಭದ್ರಾವತಿ ತಾಲೂಕಿನ ಆನವೇರಿ, ಮೈದೊಳಲು ಮತ್ತು ಕೈಮರ ಗ್ರಾಮಗಳ ವ್ಯಾಪ್ತಿಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯಡಿ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ತೊಡಗಿದ್ದ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಲಾಯಿತು. 

ಭದ್ರಾವತಿ, ನ. ೧೧: ಶಿವಮೊಗ್ಗ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ತಾಲೂಕಿನ ಆನವೇರಿ, ಮೈದೊಳಲು ಮತ್ತು ಕೈಮರ ಗ್ರಾಮಗಳ ವ್ಯಾಪ್ತಿಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯಡಿ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ತೊಡಗಿದ್ದ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ. 

ಒಟ್ಟು  ರು. ೫,೧೦೦ ದಂಡ ವಿಧಿಸಲಾಗಿದ್ದು, ಕಾರ್ಯಾಚರಣೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ತಾಲೂಕು ಕ್ಷೇತ್ರ ಆರೋಗ್ಯ  ಶಿಕ್ಷಣಾಧಿಕಾರಿ ಎನ್.ಟಿ ರಾಜೇಗೌಡ, ಹೊಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯಾಧಿಕಾರಿ ಹಾಲಸ್ವಾಮಿ, ಅಲ್ಲಾಉದ್ಧಿನ್ ತಾಜ್,  ಆರೋಗ್ಯ ನಿರೀಕ್ಷಕರು, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ರವಿರಾಜ್ ಮತ್ತು ಹೊಳೆಹೊನ್ನೂರು ಪೊಲೀಸ್ ಠಾಣೆಯ ದೇವರಾಜ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.  

No comments:

Post a Comment