Monday, November 29, 2021

ಶ್ರೀರಾಮ ಭಜನಾ ಮಂದಿರ ಲೋಕಾರ್ಪಣೆ ಅಂಗವಾಗಿ ನ.೩೦, ಡಿ.೧ರಂದು ಧಾರ್ಮಿಕ ಆಚರಣೆಗಳು

    ಭದ್ರಾವತಿ, ನ. ೨೯: ಜನ್ನಾಪುರ ಶ್ರೀ ಬಸವೇಶ್ವರ ವಿದ್ಯಾಸಂಸ್ಥೆ ಸಮೀಪ ೧೦೦ ವರ್ಷಗಳ ಇತಿಹಾಸವಿರುವ ಪುನರ್ ನಿರ್ಮಾಣ ಗೊಂಡಿರುವ ಶ್ರೀರಾಮ ಭಜನಾ ಮಂದಿರದ ಲೋಕಾರ್ಪಣೆ ಪೂರ್ವಭಾವಿಯಾಗಿ ಹೋಮ, ಹವನ ಹಾಗು ಶ್ರೀ ಸತ್ಯನಾರಾಯಣ ಪೂಜೆ ಸೇರಿದಂತೆ ಧಾರ್ಮಿಕ ಆಚರಣೆಗಳನ್ನು ಹಮ್ಮಿಕೊಳ್ಳಲಾಗಿದೆ.
    ೧೯೨೧ರಲ್ಲಿ ಸ್ಥಾಪಿತಗೊಂಡ ಮಂದಿರ ಶಿಥಿಲಗೊಂಡ ಪರಿಣಾಮ ಯಾವುದೇ ಚಟುವಟಿಕೆಗಳು ನಡೆಯದೆ ಸುಮಾರು ೧ ದಶಕದಿಂದ ಪಾಳು ಬಿದ್ದಿದ್ದು, ಸ್ಥಳೀಯ ಸಮಾನ ಮನಸ್ಕರೆಲ್ಲಾ ಸೇರಿ ಮಂದಿರ ಪುನರ್ ನಿರ್ಮಾಣ ಮಾಡಬೇಕೆಂಬ ಧ್ಯೇಯೋದ್ದೇಶದೊಂದಿಗೆ ಜನಪ್ರತಿನಿಧಿಗಳನ್ನು ಸಂಪರ್ಕಿಸಿ ಸರ್ಕಾರದಿಂದ ಅನುದಾನ ಪಡೆದುಕೊಂಡು ಮಂದಿರನ್ನು ಪುನರ್ ನಿರ್ಮಾಣಗೊಳಿಸಿದ್ದಾರೆ.
    ಮಂದಿರ ಲೋಕಾರ್ಪಣೆ ಅಂಗವಾಗಿ ನ.೩೦ರಂದು ರಾತ್ರಿ ೮ ಗಂಟೆಯಿಂದ ಹೋಮ ಹಾಗು ಡಿ.೧ರ ಬೆಳಿಗ್ಗೆ ೯.೩೦ಕ್ಕೆ ಸತ್ಯ ನಾರಾಯಣ ಪೂಜೆ ಹಮ್ಮಿಕೊಳ್ಳಲಾಗಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಸಾರ್ವಜನಿಕ ಶ್ರೀರಾಮ ಮಂಡಳಿ ಗೌರವಾಧ್ಯಕ್ಷ ಎಚ್.ಎಸ್ ನಂಜುಂಡಯ್ಯ ಕೋರಿದ್ದಾರೆ.

No comments:

Post a Comment