Thursday, November 4, 2021

ಭಾರ ಎತ್ತುವ ಸ್ಪರ್ಧೆಯಲ್ಲಿ ಡಿ. ಸಂಜಯ್‌ಗೆ ಬೆಳ್ಳಿ ಪದಕ

ಭದ್ರಾವತಿ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಡಿ. ಸಂಜಯ್ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಭಾರ ಎತ್ತುವ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.
    ಭದ್ರಾವತಿ, ನ. ೪: ನಗರದ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಡಿ. ಸಂಜಯ್ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಭಾರ ಎತ್ತುವ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.
    ದಾವಣಗೆರೆಯಲ್ಲಿ ನಡೆದ ಪುರುಷರ ರಾಜ್ಯಮಟ್ಟದ ವ್ಹೇಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಒಟ್ಟು ೧೭೫ ಕೆ.ಜಿ ಭಾರ ಎತ್ತುವ ಮೂಲಕ ಬಹುಮಾನ ಪಡೆದುಕೊಂಡಿದ್ದಾರೆ.
    ಡಿ. ಸಂಜಯ್ ದಿನೇಶ್ ಮತ್ತು ಗೀತಾ ದಂಪತಿ ಪುತ್ರರಾಗಿದ್ದು, ಪ್ರಥಮ ಬಿ.ಎ ವ್ಯಾಸಂಗ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಯನ್ನು ಶಾಸಕ ಬಿ.ಕೆ ಸಂಗಮೇಶ್ವರ್, ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ, ದೈಹಿಕ ಶಿಕ್ಷಣ ನಿರ್ದೇಶಕ ಎಂ.ಡಿ ವಿಶ್ವನಾಥ್ ಹಾಗು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಸೇರಿದಂತೆ ಇನ್ನಿತರರು ಅಭಿನಂದಿಸಿದ್ದಾರೆ.

2 comments:

  1. Amazing macha super ❤️.
    Do well keep going
    One day achieve (IPS)

    ReplyDelete
  2. Congratulations my dear friend Sanjay god bless you let Karnataka take a name for a country that is doing tha same

    ReplyDelete