ದೀಪಾವಳಿ ಹಬ್ಬದಂದು ವಿಶೇಷವಾಗಿ ಬಂಜಾರ ಜನಾಂಗದಲ್ಲಿ ದೀಪ ಬೆಳಗುವುದು(ಮೇರಾ ಮಾಡುವುದು) ವಾಡಿಕೆಯಾಗಿದ್ದು, ಭದ್ರಾವತಿ ತಾಲೂಕಿನ ಸಿರಿಯೂರು ತಾಂಡ ಸೇರಿದಂತೆ ಇತರೆಡೆ ಬಂಜಾರ ಜನಾಂಗದ ಕುಟುಂಬದ ಹೆಣ್ಣು ಮಕ್ಕಳು ಗ್ರಾಮದ ಮನೆ ಮನೆಗಳಿಗೆ ತೆರಳಿ ದೀಪ ಬೆಳಗಿದರು.
ಭದ್ರಾವತಿ, ನ. ೭: ದೀಪಾವಳಿ ಹಬ್ಬದಂದು ವಿಶೇಷವಾಗಿ ಬಂಜಾರ ಜನಾಂಗದಲ್ಲಿ ದೀಪ ಬೆಳಗುವುದು(ಮೇರಾ ಮಾಡುವುದು) ವಾಡಿಕೆಯಾಗಿದ್ದು, ತಾಲೂಕಿನ ಸಿರಿಯೂರು ತಾಂಡ ಸೇರಿದಂತೆ ಇತರೆಡೆ ಬಂಜಾರ ಜನಾಂಗದ ಕುಟುಂಬದ ಹೆಣ್ಣು ಮಕ್ಕಳು ಗ್ರಾಮದ ಮನೆ ಮನೆಗಳಿಗೆ ತೆರಳಿ ದೀಪ ಬೆಳಗಿದರು.
ಬಂಜಾರ ಜನಾಂಗದಲ್ಲಿ ದೀಪವನ್ನು ಹೆಣ್ಣಿಗೆ ಹೋಲಿಕೆ ಮಾಡಿದ್ದು, ಹೆಣ್ಣು ಮನೆ ಬೆಳಗುವ ದೀಪ ಎಂಬ ಗೌರವಭಾವದಿಂದ ಕಾಣಲಾಗುತ್ತದೆ. ಈ ಕಾರಣದಿಂದ ಈ ಜನಾಂಗದ ಹೆಣ್ಣು ಮಕ್ಕಳು ಅಮಾವಾಸ್ಯೆ ರಾತ್ರಿಯಂದು ದೀಪ ಹಿಡಿದು ತಂದೆಗೆ 'ಬಾಪೂ ತೋನ ಮೇರಾ', ತಾಯಿಗೆ 'ಯಾಡಿ ತೋನ ಮೇರಾ', ಅಣ್ಣನಿಗೆ 'ಭೀಯಾ ತೋನ ಮೇರಾ', ಅತ್ತೆಗೆ 'ಫೂಫಿ ತೋನ ಮೇರಾ' ಹೀಗೆ ಕುಟುಂಬ ಪ್ರತಿಯೊಬ್ಬ ಸದಸ್ಯರಿಗೂ, ಹಿತೈಷಿಗಳಿಗೂ ದೀಪ ಬೆಳಗುವ ಮೂಲಕ ಶುಭ ಹಾರೈಸುತ್ತಾರೆ.
ಹೆಣ್ಣು ದೀಪ ಬೆಳಗುವ ಮೂಲಕ ಆ ಮನೆಯ ಅಂಧಕಾರ, ದೃಷ್ಟಶಕ್ತಿ ದೂರವಾಗುತ್ತದೆ ಎಂಬ ನಂಬಿಕೆ ಈ ಜನಾಂಗದ್ದಾಗಿದೆ. ಸಿರಿಯೂರು ತಾಂಡದಲ್ಲಿ ಬಂಜಾರ ಯುವ ವೇದಿಕೆ ಅಧ್ಯಕ್ಷ ಕೃಷ್ಣನಾಯ್ಕ ಕುಟುಂಬ ಸದಸ್ಯರು ದೀಪ ಬೆಳಗುವ ಮೂಲಕ ಗಮನ ಸೆಳೆದರು.
No comments:
Post a Comment