Friday, November 19, 2021

ಸಹ ಶಿಕ್ಷಕ ಎಂ. ದಿವಾಕರ್‌ಗೆ ಕರುನಾಡ ಚೇತನ ಪ್ರಶಸ್ತಿ

ಹುಬ್ಬಳ್ಳಿ ಕರ್ನಾಟಕ ಸೋಷಿಯಲ್ ಕ್ಲಬ್, ಚೇತನ ಫೌಂಡೇಷನ್ ವತಿಯಿಂದ ಧಾರವಾಡದ ರಂಗಾಯಣ ಸುವರ್ಣ ಸಮುಚ್ಛಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಜ್ಯೋತ್ಸವ ಸಂಭ್ರಮ ಸಮಾರಂಭದಲ್ಲಿ ಭದ್ರಾವತಿ ಹಳೇನಗರದ ಸಂಚಿಯ ಹೊನ್ಮಮ್ಮ ಸರ್ಕಾರಿ ಬಾಲಿಕಾ ಪ್ರೌಢ ಶಾಲೆಯ ಸಹ ಶಿಕ್ಷಕ ಎಂ. ದಿವಾಕರ್‌ರವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಸೇವೆಯನ್ನು ಗುರುತಿಸಿ ಕರುನಾಡ ಚೇತನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.  
    ಭದ್ರಾವತಿ, ನ. ೧೯ :  ಹುಬ್ಬಳ್ಳಿ ಕರ್ನಾಟಕ ಸೋಷಿಯಲ್ ಕ್ಲಬ್, ಚೇತನ ಫೌಂಡೇಷನ್ ವತಿಯಿಂದ ಧಾರವಾಡದ ರಂಗಾಯಣ ಸುವರ್ಣ ಸಮುಚ್ಛಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಜ್ಯೋತ್ಸವ ಸಂಭ್ರಮ ಸಮಾರಂಭದಲ್ಲಿ ಹಳೇನಗರದ ಸಂಚಿಯ ಹೊನ್ಮಮ್ಮ ಸರ್ಕಾರಿ ಬಾಲಿಕಾ ಪ್ರೌಢ ಶಾಲೆಯ ಸಹ ಶಿಕ್ಷಕ ಎಂ. ದಿವಾಕರ್‌ರವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಸೇವೆಯನ್ನು ಗುರುತಿಸಿ ಕರುನಾಡ ಚೇತನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.  
    ಎಂ. ದಿವಾಕರ್‌ರವರು ೧೯೯೮ ರಿಂದ ಇಲ್ಲಿಯವರೆಗೂ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ವಿವಿಧ ಸುಮಾರು ೮೭ ತರಬೇತಿಗಳಿಗೆ ರಾಜ್ಯ, ಜಿಲ್ಲಾ ಹಾಗು ತಾಲೂಕು ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದಾರೆ. ಬಿ.ಎಸ್‌ ಮತ್ತು ಡಿ.ಎಡ್‌ ಕಾಲೇಜುಗ ಪ್ರಶಿಕ್ಷಣಾರ್ಥಿಗಳಿಗೆ ತರಬೇತಿ ನೀಡಿರುತ್ತಾರೆ. ೨೦೧೦ರಲ್ಲಿ ಕರ್ನಾಕ ಸರ್ಕಾರದ ಶಿಕ್ಷಕರ ಸಂಪನ್ಮೂಲ ಪುಸ್ತಕಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಹಾಗು ಶಿಕ್ಷಕನಾಗಿ ಕಾರ್ಯನಿರ್ವಹಿಸಿರುತ್ತಾರೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಭದ್ರಾವತಿ ಆಕಾಶವಾಣಿ ಕೇಂದ್ರದಿಂದ ಪ್ರಸಾರವಾಗುತ್ತಿರುವ ಸಹಾಯವಾಣಿ ಕಾರ್ಯಕ್ರಮದಲ್ಲಿ ೨೦೧೨ ರಿಂದ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ೧೯೯೮ರಿಂದ ರಿಂದ ೨೦೧೦ರ ವರೆಗೆ ಚಿಕ್ಕಬಳ್ಳಾಪುರ ಹಾಗು ಶಿವಮೊಗ್ಗ ಜಿಲ್ಲೆಗಳಲ್ಲಿ ಆಸಕ್ತ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕ್ಯಾಲಿಗ್ರಫಿ ತರಬೇತಿಯನ್ನು ಉಚಿತವಾಗಿ ನೀಡಿದ್ದಾರೆ. ೨೦೦೨ರಲ್ಲಿ ಚಿಂತಾಮಣಿ ತಾಲೂಕಿನ ಉತ್ತಮ ಶಿಕ್ಷಕ ಪ್ರಶಸ್ತಿ ಹಾಗು ೨೦೦೯ರಲ್ಲಿ ಭದ್ರಾವತಿಯಲ್ಲಿ ಗಣರಾಜ್ಯೋತ್ಸವ ಪ್ರಶಸ್ತಿ, ಇತ್ತೀಚೆಗೆ ಬೆಳಗಾವಿಯಲ್ಲಿ ವಿದ್ಯಾಭೂಷಣ ಹಾಗು ಗುರುಕುಲ ತಿಲಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಇವರ ಸಾಧನೆಯನ್ನು ಗುರುತಿಸಿ ಇದೀಗ ಕರುನಾಡ ಚೇತನ ಪ್ರಶಸ್ತಿಯನ್ನು ನೀಡಲಾಗಿದೆ.
     ಶಿವಮೊಗ್ಗ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್‌ ಸೋಮಶೇಖರಯ್ಯ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿದ್ದಬಸಪ್ಪ ಸೇರಿದಂತೆ ಇನ್ನಿತರ ಗಣ್ಯರು ಎಂ. ದಿವಾಕರ್‌ರನ್ನು ಅಭಿನಂದಿಸಿದ್ದಾರೆ.

No comments:

Post a Comment