ನಾಗರಾಜ್
ಭದ್ರಾವತಿ, ಡಿ. ೧: ಕರ್ನಾಟಕ ಸ್ಟೇಟ್ ಕನ್ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ತಾಲೂಕು ಶಾಖೆ ಮಾಜಿ ಅಧ್ಯಕ್ಷ, ಆಂಜನೇಯ ಅಗ್ರಹಾರ ಕೂಲಿಬ್ಲಾಕ್ ಶೆಡ್ ನಿವಾಸಿ ನಾಗರಾಜ್(೬೫) ನಿಧನ ಹೊಂದಿದರು.
ಪತ್ನಿ, ಓರ್ವ ಪುತ್ರನನ್ನು ಹೊಂದಿದ್ದರು. ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್ ಸಮೀಪದಲ್ಲಿರುವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿತು. ಹಲವಾರು ವರ್ಷಗಳಿಂದ ಯೂನಿಯನ್ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಜೊತೆಗೆ ಮಾದರಿ ಸಂಘಟನೆಯಾಗಿ ಯೂನಿಯನ್ ಮುನ್ನಡೆಸಿಕೊಂಡು ಹೋಗುವಲ್ಲಿ ಯಶಸ್ವಿಯಾಗಿದ್ದರು. ಇವರ ನಿಧನಕ್ಕೆ ಯೂನಿಯನ್ ಜಿಲ್ಲಾ ಹಾಗು ತಾಲೂಕು ಪದಾಧಿಕಾರಿಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸಂತಾಪ ಸೂಚಿಸಿದ್ದಾರೆ.
No comments:
Post a Comment