Monday, December 13, 2021

ದಯಾನಂದ ನಿಧನ


ದಯಾನಂದ
    ಭದ್ರಾವತಿ, ಡಿ. ೧೩: ತಾಲೂಕಿನ ಕಾಳಿಂಗನಹಳ್ಳಿ ನಿವಾಸಿ, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಬದರಿನಾರಾಯಣ ಅವರ ಸಹೋದರ ದಯಾನಂದ(೪೭) ಭಾನುವಾರ ನಿಧನ ಹೊಂದಿದರು.
    ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಹೊಂದಿದ್ದರು. ಅನಾರೋಗ್ಯಕ್ಕೆ ಒಳಗಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರ ಅಂತ್ಯಕ್ರಿಯೆ ಗ್ರಾಮದ ಸ್ಮಶಾನದಲ್ಲಿ ಸೋಮವಾರ ಬೆಳಿಗ್ಗೆ ನೆರವೇರಿಸಲಾಯಿತು. ತಾಲೂಕು ಛಲವಾದಿ ಸಮಾಜ(ಪ.ಜಾ) ಹಾಗು ಛಲವಾದಿ ಮಹಾಸಭಾ ಸಂತಾಪ ಸೂಚಿಸಿವೆ.  

No comments:

Post a Comment