ಶಶಿಕುಮಾರ್ ಎಸ್ ಗೌಡ
ಭದ್ರಾವತಿ, ಡಿ. ೧೪: ಸಮಾಜವಾದಿ ಚಿಂತನೆಗಳ ನೆಲೆಗಟ್ಟಿನ ಮೇಲೆ ಈಗಲೂ ಸಾರ್ವತ್ರಿಕ ಚುನಾವಣೆಗಳನ್ನು ಎದುರಿಸುತ್ತಿರುವ ನಗರದ ಜನ್ನಾಪುರ ಹಾಲಪ್ಪಶೆಡ್ ನಿವಾಸಿ ಶಶಿಕುಮಾರ್ ಎಸ್ ಗೌಡ ಈ ಬಾರಿ ವಿಧಾನ ಪರಿಷತ್ ಚುನಾವಣೆಯಲ್ಲಿ ೩ ಮತಗಳನ್ನು ಪಡೆದುಕೊಂಡಿದ್ದಾರೆ.
ಸಾರ್ವತ್ರಿಕ ಚುನಾವಣೆಗಳಲ್ಲಿ ನೈತಿಕತೆ, ಪಾರದರ್ಶಕತೆ ಕಾಯ್ದುಕೊಳ್ಳಬೇಕೆಂಬ ಉದ್ದೇಶದೊಂದಿಗೆ ಶಶಿಕುಮಾರ್ ಎಸ್ ಗೌಡ ಲೋಕಸಭೆ, ವಿಧಾನಸಭೆ, ನಗರಸಭೆ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದರು. ಇದೀಗ ವಿಧಾನಪರಿಷತ್ ಚುನಾವಣೆಯಲ್ಲೂ ಸ್ಪರ್ಧಿಸಿ ಗಮನ ಸೆಳೆದಿದ್ದರು.
ಜನತಾದಳ(ಸಂಯುಕ್ತ) ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಶಿಕುಮಾರ್ ಎಸ್ ಗೌಡ ಪರವಾಗಿ ಪಕ್ಷದ ರಾಜ್ಯಾಧ್ಯಕ್ಷ ಮಹಿಮಾ ಜೆ. ಪಟೇಲ್, ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣಗೌಡ ಮತ್ತು ಕರ್ನಾಟಕ ರಾಷ್ಟ್ರ ಸಮಿತಿ ರಾಜ್ಯಾಧ್ಯಕ್ಷ ರವಿಕೃಷ್ಣ ರೆಡ್ಡಿ ಪ್ರಚಾರ ನಡೆಸಿದ್ದರು.
No comments:
Post a Comment