Friday, December 24, 2021

ಎಂಪಿಎಂ ಸಹಕಾರ ಸಂಘದ ೭೦ನೇ ಸರ್ವ ಸದಸ್ಯರ ಸಭೆ

ರಾಜ್ಯ ಸರ್ಕಾರಿ ಸ್ವಾಮ್ಯದ ಭದ್ರಾವತಿ ಮೈಸೂರು ಕಾಗದ ಕಾರ್ಖಾನೆಯ ಸಹಕಾರ ಸಂಘದ ೭೦ನೇ ಸರ್ವ ಸದಸ್ಯರ ಸಭೆ ಕಾಗದನಗರದ ವನಿತಾ ಸಮಾಜದಲ್ಲಿ ಯಶಸ್ವಿಯಾಗಿ ನಡೆಯಿತು.
    ಭದ್ರಾವತಿ, ಡಿ. ೨೪: ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯ ಸಹಕಾರ ಸಂಘದ ೭೦ನೇ ಸರ್ವ ಸದಸ್ಯರ ಸಭೆ ಕಾಗದನಗರದ ವನಿತಾ ಸಮಾಜದಲ್ಲಿ ಯಶಸ್ವಿಯಾಗಿ ನಡೆಯಿತು.
    ಕಳೆದ ಸುಮಾರು ೬ ವರ್ಷಗಳಿಂದ ಕಾರ್ಖಾನೆ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಉಳಿದುಕೊಂಡಿರುವ ಅಲ್ಪ ಪ್ರಮಾಣದ ಕಾರ್ಮಿಕರು ಸಂಘವನ್ನು ಸಂಕಷ್ಟದಲ್ಲಿಯೇ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ.
    ಸರ್ವಸದಸ್ಯರ ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ದಿನೇಶ್ ವಹಿಸಿದ್ದರು. ಕೃಷ್ಣಸ್ವಾಮಿ ಸಂಘದ ನಡಾವಳಿ ನಡೆಸಿಕೊಟ್ಟರು. ಸಂಘದ ನಿರ್ದೇಶಕರು, ಮುಖ್ಯ ಕಾರ್ಯನಿರ್ವಾಹಕರು ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿಗಳು, ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.

No comments:

Post a Comment