Friday, December 3, 2021

ಭದ್ರಾ ಸುಗಮ ಸಂಗೀತ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವ

ಭದ್ರಾ ಸುಗಮ ಸಂಗೀತ ವೇದಿಕೆ ವತಿಯಿಂದ ಭದ್ರಾವತಿ ಹಳೇನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವದಲ್ಲಿ ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಮಾತನಾಡಿದರು.
    ಭದ್ರಾವತಿ, ಡಿ. ೩: ಭದ್ರಾ ಸುಗಮ ಸಂಗೀತ ವೇದಿಕೆ ವತಿಯಿಂದ ಹಳೇನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
    ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು.  ಸಮೂಹ ಗಾಯನ ಹಾಗು ನಾಡು-ನುಡಿ ಕುರಿತು ಭಾಷಣ ಸ್ಪರ್ಧೆ ಮತ್ತು ಕ್ರೀಡಾ ಸ್ಪರ್ಧೆಗಳು ಜರುಗಿದವು.
    ವಿಜೇತರಿಗೆ ಪುಸ್ತಕಗಳನ್ನು ಬಹುಮಾನವಾಗಿ ವಿತರಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ವೇದಿಕೆಯ ಸದಸ್ಯರಾದ ಬಿ. ಕಾಂತಪ್ಪ, ನಂದಿನಿ ಮಲ್ಲಿಕಾರ್ಜುನ,  ಅನ್ನಪೂಣ೯ ಸತೀಶ್ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಗೌರವಿಸಲಾಯಿತು.
    ವೇದಿಕೆ ಅಧ್ಯಕ್ಷ  ಕಾ.ರಾ.ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು. ಗೌರವಧ್ಯಕ್ಷ ಎಂ.ಎಸ್ ಜನಾರ್ಧನಾ ಅಯ್ಯಂಗಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾಯ೯ದಶಿ೯ ಜ್ಯೋತಿ ರಾಜಶೇಖರ್ ಸ್ವಾಗತಿಸಿದರು. ಅಡವೀಶಯ್ಯ  ನಿರೂಪಿಸಿ ಶೋಭಾ ಗಂಗರಾಜ್ ವಂದಿಸಿದರು.

No comments:

Post a Comment