ಭದ್ರಾವತಿಯಲ್ಲಿ ಅಮಲೋದ್ಭವಿ ಮಾತೆಯ ದೇವಾಲಯ ಹಾಗೂ ಉಜ್ಜನಿಪುರ ನಗರ ಆರೋಗ್ಯ ಕೇಂದ್ರ ವತಿಯಿಂದ ಕೋವಿಡ್ ಲಸಿಕೆ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಡಿ. ೭: ಅಮಲೋದ್ಭವಿ ಮಾತೆಯ ದೇವಾಲಯ ಹಾಗೂ ಉಜ್ಜನಿಪುರ ನಗರ ಆರೋಗ್ಯ ಕೇಂದ್ರ ವತಿಯಿಂದ ಕೋವಿಡ್ ಲಸಿಕೆ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ನ್ಯೂಟೌನ್ ಅಮಲೋದ್ಭವಿ ಮಾತೆಯ ದೇವಾಲಯದ ಆವರಣದಲ್ಲಿ ನಡೆದ ಅಭಿಯಾನದಲ್ಲಿ ಇದುವರೆಗೂ ಲಸಿಕೆ ಪಡೆಯದವರಿಗೆ ಹಾಗೂ ಮೊದಲನೇ ಡೋಸ್ ಪಡೆದವರಿಗೆ ೨ನೇ ಡೋಸ್ ನೀಡಲಾಯಿತು.
ಶಿಬಿರದಲ್ಲಿ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡೂ ಬಗೆಯ ಲಸಿಕೆಗಳನ್ನು ಲಸಿಕೆ ಪಡೆಯುವವರ ಅಪೇಕ್ಷೆಯಂತೆ ನೀಡಲಾಯಿತು.
ಫಾದರ್ ಲಾನ್ಸಿ ಡಿಸೋಜಾ ಮತ್ತು ಪಾಲನಾ ಪರಿಷತ್ ಕಾರ್ಯದರ್ಶಿ ಅಂತೋಣಿ ವಿಲ್ಸನ್, ಉಜ್ಜನಿಪುರ ನಗರ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment