Monday, December 13, 2021

ನ್ಯಾಯಬೆಲೆ ಅಂಗಡಿ ಸಿಬ್ಬಂದಿ ದಿನೇಶ್ ನಿಧನ

ದಿನೇಶ್
    ಭದ್ರಾವತಿ, ಡಿ. ೧೩: ನಗರಸಭೆ ವ್ಯಾಪ್ತಿಯ ಹೊಸಸಿದ್ದಾಪುರ ಗ್ರಾಮದ ನ್ಯಾಯಬೆಲೆ ಅಂಗಡಿಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ದಿನೇಶ್(೪೮) ಸೋಮವಾರ ನಿಧನ ಹೊಂದಿದರು.
    ಪತ್ನಿ, ಇಬ್ಬರು ಪುತ್ರಿಯರನ್ನು ಹೊಂದಿದ್ದರು. ದಿನೇಶ್ ಕೆಲವು ತಿಂಗಳುಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಇವರ ಅಂತ್ಯಕ್ರಿಯೆ ಬೈಪಾಸ್ ರಸ್ತೆ ಬುಳ್ಳಾಪುರದಲ್ಲಿರುವ ಹಿಂದೂ ರುದ್ರ ಭೂಮಿಯಲ್ಲಿ ನೆರವೇರಲಿದೆ. ಮೃತರ ನಿಧನಕ್ಕೆ ಸರ್ಕಾರಿ ಪಡಿತರ ವಿತರಕರ ಸಂಘದ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗಯ್ಯ ಸೇರಿದಂತೆ ಪಡಿತರ ವಿತರಕರು ಸಂತಾಪ ಸೂಚಿಸಿದ್ದಾರೆ.

No comments:

Post a Comment