ಶುಕ್ರವಾರ, ಡಿಸೆಂಬರ್ 10, 2021

ಹೆಲಿಕಾಪ್ಟರ್ ದುರುಂತದಲ್ಲಿ ವೀರ ಮರಣ ಹೊಂದಿದವರಿಗೆ ಮಾಜಿ ಸೈನಿಕರಿಂದ ಶ್ರದ್ದಾಂಜಲಿ

ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ವೀರ ಮರಣ ಹೊಂದಿದ ಸೇನಾಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗು ಅವರ ಪತ್ನಿ ಮಧುಲಿಕಾ ರಾವತ್ ಮತ್ತು ೧೧ ಯೋಧರಿಗೆ ಭದ್ರಾವತಿ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಶ್ರದ್ದಾಂಜಲಿ ಸಲ್ಲಿಸಲಾಯಿತು.
    ಭದ್ರಾವತಿ, ಡಿ. ೧೦:  ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ವೀರ ಮರಣ ಹೊಂದಿದ ಸೇನಾಪಡೆಗಳ ಮುಖ್ಯಸ್ಥ  ಜನರಲ್ ಬಿಪಿನ್ ರಾವತ್ ಹಾಗು ಅವರ ಪತ್ನಿ ಮಧುಲಿಕಾ ರಾವತ್ ಮತ್ತು ೧೧ ಯೋಧರಿಗೆ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಶ್ರದ್ದಾಂಜಲಿ ಸಲ್ಲಿಸಲಾಯಿತು.
    ಜನರಲ್ ಬಿಪಿನ್ ರಾವತ್‌ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮೇಣದ ಬತ್ತಿ ಹಚ್ಚಿ ಮೌನಾಚರಣೆ ನಡೆಸುವ ಮೂಲಕ ಸಂತಾಪ ಸೂಚಿಸಿ ಮಾತನಾಡಿದ ಪ್ರಮುಖರು, ಭಾರತೀಯ ಸೇನೆಯಲ್ಲಿ ಸುಮಾರು ೪೩ ವರ್ಷಗಳ ನಿರಂತರ ವೃತ್ತಿ ಸೇವೆಯಲ್ಲಿ ಜನರಲ್ ಬಿಪಿನ್ ರಾವತ್‌ರವರು ದೇಶಕ್ಕೆ ನೀಡಿರುವ ಕೊಡುಗೆ ಅವಿಸ್ಮರಣೀಯವಾಗಿದೆ. ದೇಶದ ರಕ್ಷಣಾ ಸಾಮರ್ಥ್ಯವನ್ನು ಎತ್ತಿ ಹಿಡಿಯುವ ಜೊತೆಗೆ ಶತ್ರು ರಾಷ್ಟ್ರಗಳಲ್ಲಿ ಭಯ ಹುಟ್ಟಿಸಿದ್ದರು. ಇಂತಹ ದಕ್ಷ ಅಧಿಕಾರಿ ಕಳೆದುಕೊಂಡಿರುವುದು ವಿಷಾದನೀಯ ಬೆಳವಣಿಯಾಗಿದೆ ಎಂದರು.
    ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟಗಿರಿ, ಉಪಾಧ್ಯಕ್ಷ ಬಿ.ಆರ್ ದಿನೇಶ್‌ಕುಮಾರ್, ಮಾಜಿ ಸೈನಿಕರಾದ ದಿವಾಕರ್, ಹರೀಶ್, ವೆಂಕಟೇಶ್, ಅಭಿಲಾಶ್, ಗುಳ್‌ಗುಳೆ, ಮುದುಗಲ ರಾಮರೆಡ್ಡಿ, ದೇವರಾಜ್, ಶ್ರೀಧರ್, ಬಸ್ ಹಾಗು ಆಟೋ ಚಾಲಕರು, ವಿದ್ಯಾರ್ಥಿಗಳು, ಪೊಲೀಸ್ ಹಾಗು ಅರಣ್ಯ ಇಲಾಖೆ ಸಿಬ್ಬಂದಿಗಳು ಮತ್ತು ನಾಗರೀಕರು ಪಾಲ್ಗೊಂಡಿದ್ದರು.  


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ