Monday, December 27, 2021

ಕೆ.ಸಿ ವೀರಭದ್ರಗೌಡ್ರುರವರು ಸಮಾಜಕ್ಕೆ ಸಲ್ಲಿಸಿರುವ ಸೇವೆ ಅಪಾರ : ಬಿ.ಕೆ ಸಂಗಮೇಶ್ವರ್

ಭದ್ರಾವತಿ ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿ ಕಣಕಟ್ಟೆಯಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಲಯನ್ಸ್ ಕೆ.ಸಿ ವೀರಭದ್ರಗೌಡ್ರುರವರ ಕೈಲಾಸ ಶಿವಗಣಾರಾಧನೆ ಹಾಗು ಸರ್ವಶರಣ ಸಮ್ಮೇಳನದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಪಾಲ್ಗೊಂಡು ಮಾತನಾಡಿದರು.
    ಭದ್ರಾವತಿ, ಡಿ. ೨೭: ದಿವಂಗತ ಲಯನ್ಸ್ ಕೆ.ಸಿ ವೀರಭದ್ರಗೌಡ್ರುರವರು ಸಮಾಜಕ್ಕೆ ಸಲ್ಲಿಸಿರುವ ಸೇವೆ ಅಪಾರವಾಗಿದ್ದು, ಇವರ ಆದರ್ಶತನ ಎಲ್ಲರಿಗೂ ಮಾದರಿಯಾಗಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಸ್ಮರಿಸಿದರು.
    ಅವರು ಸೋಮವಾರ ನಗರಸಭೆ ವ್ಯಾಪ್ತಿಯ ಭದ್ರಾ ಕಾಲೋನಿ ಕಣಕಟ್ಟೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಲಯನ್ಸ್ ಕೆ.ಸಿ ವೀರಭದ್ರಗೌಡ್ರುರವರ ಕೈಲಾಸ ಶಿವಗಣಾರಾಧನೆ ಹಾಗು ಸರ್ವಶರಣ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದರು.
ಸಮಾಜದ ಎಲ್ಲರೊಂದಿಗೆ ಉತ್ತಮ ಬಾಂಧವ್ಯ, ಜೊತೆಗೆ ಸೇವಾ ಮನೋಭಾವನೆ ಹೊಂದಿದ್ದ ವೀರಭದ್ರಗೌಡ್ರುರವರು ಸಮಾಜಕ್ಕೆ ಸಲ್ಲಿಸಿರುವ ಸೇವೆ ಶ್ಲಾಘನೀಯ ಎಂದರು.
    ಚಿತ್ರದುರ್ಗ ಸಿರಿಗೆರೆ ತರಳಬಾಳು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ರೈತ ಮುಖಂಡ ಎಚ್.ಆರ್ ಬಸವರಾಜಪ್ಪ, ಕರ್ನಾಟಕ ನೀರು ಸರಬರಾಜು, ಒಳಚರಂಡಿ ಮಂಡಳಿ ಸದಸ್ಯ ಮಂಗೋಟೆ ರುದ್ರೇಶ್, ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಪ್ರಧಾನ ಕಾರ್ಯದರ್ಶಿ ಬಿ.ಎಸ್ ಮಹೇಶ್‌ಕುಮಾರ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

No comments:

Post a Comment