ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಆಗ್ರಹ
ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿ ಜಯಕರ್ನಾಟಕ ಸಂಘಟನೆ ವತಿಯಿಂದ ಭಾನುವಾರ ೬೬ನೇ ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಜರುಗಿತು.
ಭದ್ರಾವತಿ, ಡಿ. ೧೯: ತಾಲೂಕಿನ ಶಂಕರಘಟ್ಟದಲ್ಲಿ ಜಯಕರ್ನಾಟಕ ಸಂಘಟನೆ ವತಿಯಿಂದ ಭಾನುವಾರ ೬೬ನೇ ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಜರುಗಿತು.
ಶಂಕರಘಟ್ಟ ಘಟಕದ ಅಧ್ಯಕ್ಷ ಟಿ.ಡಿ ಶಶಿಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಎಂ. ರಮೇಶ್ ಹಾಗು ನಂದೀಶ್ ಧ್ವಜಾರೋಹಣ ನೆರವೇರಿಸಿದರು.
ಪ್ರಮುಖರು ಮಾತನಾಡಿ, ಕನ್ನಡ ನೆಲ, ಜಲ, ಭಾಷೆಗಾಗಿ ನಿರಂತರ ಹೋರಾಟ ಅಗತ್ಯವಿದ್ದು, ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆ ಪುಂಡಾಟಿಕೆಯನ್ನು ಖಂಡಿಸುವ ಜೊತೆಗೆ ತಕ್ಷಣ ಈ ಸಂಘಟನೆಯನ್ನು ರಾಜ್ಯದಿಂದ ಕಿತ್ತೊಗೆಯಬೇಕೆಂದು ಆಗ್ರಹಿಸಿದರು. ಅಲ್ಲದೆ ಈ ವಿಚಾರವನ್ನು ಬೆಳಗಾವಿ ಅಧಿವೇಶನದಲ್ಲಿ ಶಾಸಕರು ಪ್ರಸ್ತಾಪಿಸುವಂತೆ ಮನವಿ ಮಾಡಲಾಯಿತು.
ಸಂಘಟನೆ ಜಿಲ್ಲಾ ಕಾರ್ಯಾಧ್ಯಕ್ಷ ರೆಹಮಾನ್, ಭದ್ರಾವತಿ ತಾಲೂಕು ಕಾರ್ಯಾಧ್ಯಕ್ಷ ಚೇತನ್ ಮತ್ತು ಜಿಲ್ಲಾ ಉಪಾಧ್ಯಕ್ಷ ತ್ಯಾಗರಾಜ ಹಾಗು ಪ್ರಮುಖರಾದ ದಿವ್ಯರಾಜ್, ಶ್ರೀಕಾಂತ್, ಮಂಜುನಾಥ್, ಈರಣ್ಣ, ಮುರುಗೇಶ್ ಸೇರಿದಂತೆ ಸಂಘಟನೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು.
No comments:
Post a Comment