ಭದ್ರಾವತಿ ನಗರಸಭೆ ವಾರ್ಡ್ ನಂ.೩೨ರ ವ್ಯಾಪ್ತಿಯ ಜನ್ನಾಪುರ ಲಿಂಗಾಯತರ ಬೀದಿ ಸ್ವಾಗತ್ ಗ್ರೂಪ್ಸ್ ವತಿಯಿಂದ ಭಾನುವಾರ ಪ್ರತಿವರ್ಷದಂತೆ ಈ ಬಾರಿ ಸಹ ಕನ್ನಡ ರಾಜ್ಯೋತ್ಸವ ಹಾಗು ಚಲನಚಿತ್ರ ನಟ, ಸಮಾಜ ಸೇವಕ ಪುನೀತ್ ರಾಜ್ಕುಮಾರ್ರವರ ಪುಣ್ಯ ಸ್ಮರಣೆ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಡಿ. ೫: ನಗರಸಭೆ ವಾರ್ಡ್ ನಂ.೩೨ರ ವ್ಯಾಪ್ತಿಯ ಜನ್ನಾಪುರ ಲಿಂಗಾಯತರ ಬೀದಿ ಸ್ವಾಗತ್ ಗ್ರೂಪ್ಸ್ ವತಿಯಿಂದ ಭಾನುವಾರ ಪ್ರತಿವರ್ಷದಂತೆ ಈ ಬಾರಿ ಸಹ ಕನ್ನಡ ರಾಜ್ಯೋತ್ಸವ ಹಾಗು ಚಲನಚಿತ್ರ ನಟ, ಸಮಾಜ ಸೇವಕ ಪುನೀತ್ ರಾಜ್ಕುಮಾರ್ರವರ ಪುಣ್ಯ ಸ್ಮರಣೆ ಹಮ್ಮಿಕೊಳ್ಳಲಾಗಿತ್ತು.
ಯುವ ಮುಖಂಡ ಬಿ.ಎಸ್ ಗಣೇಶ್, ನಗರಸಭೆ ಉಪಾಧ್ಯಕ್ಷ ಚನ್ನಪ್ಪ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಪ್ರಮುಖರು ಸಂಘಟನೆ ಯಾವುದೇ ಫಲಾಪೇಕ್ಷೆ ಇಲ್ಲದೆ ಸ್ವಯಂ ಪ್ರೇರಣೆಯಿಂದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುವ ಮೂಲಕ ಗುರುತಿಸಿಕೊಂಡಿರುವುದು ಹೆಮ್ಮೆಯ ವಿಚಾರವಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟನೆಯಾಗುವ ಮೂಲಕ ಹೆಚ್ಚು ಹೆಚ್ಚು ಕಾರ್ಯಕ್ರಮಗಳು ನಡೆಯುವಂತಾಗಲಿ. ಸಂಘಟನೆಗೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧ ಎಂದರು.
ನಗರಸಭಾ ಸದಸ್ಯರಾದ ಆರ್. ಮೋಹನ್ಕುಮಾರ್, ಕಾಂತರಾಜ್, ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ್ಕುಮಾರ್, ವೀರಶೈವ ಯುವ ಘಟಕದ ಅಧ್ಯಕ್ಷ ಮಂಜುನಾಥ್, ಮುಖಂಡರಾದ ಕೃಷ್ಣರಾಜ್, ಹರೀಶ್, ಚಂದ್ರಣ್ಣ, ಮಂಜಣ್ಣ ಹಾಗು ಸ್ವಾಗತ್ ಗ್ರೂಪ್ಸ್ ಪದಾಧಿಕಾರಿಗಳು ಮತ್ತು ಸ್ಥಳೀಯರು ಪಾಲ್ಗೊಂಡಿದ್ದರು.
No comments:
Post a Comment