Tuesday, December 21, 2021

ಜಗಜ್ಯೋತಿ ಬಸವೇಶ್ವರರ ಭಾವಚಿತ್ರಕ್ಕೆ ಮಸಿ : ಸೂಕ್ತ ಕ್ರಮಕ್ಕೆ ಮನವಿ

ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಸಮಾನ, ಸಮತೆಯ ಸಮಾಜ ನಿರ್ಮಾಣದ ಹರಿಕಾರ, ಮಹಾ ಮಾನವತಾವಾದಿ, ವಿಶ್ವ ಗುರು, ಜಗಜ್ಯೋತಿ ಬಸವಣ್ಣನವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಮಸಿ ಬಳೆದು ಅವಮಾನಿಸಿರುವ ಘಟನೆಯನ್ನು ಖಂಡಿಸಿ ಮಂಗಳವಾರ ಭದ್ರಾವತಿಯಲ್ಲಿ ತಾಲೂಕು ಕಛೇರಿ ಮಿನಿ ವಿಧಾನಸೌಧದ ಮುಂಭಾಗ ಅಖಿಲ ಭಾರತ ವೀರಶೈವ ಮಹಾಸಭಾ, ಯುವ ಘಟಕ ಹಾಗು ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಡಿ. ೨೧: ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಸಮಾನ, ಸಮತೆಯ ಸಮಾಜ ನಿರ್ಮಾಣದ ಹರಿಕಾರ, ಮಹಾ ಮಾನವತಾವಾದಿ, ವಿಶ್ವ ಗುರು, ಜಗಜ್ಯೋತಿ ಬಸವಣ್ಣನವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಮಸಿ ಬಳೆದು ಅವಮಾನಿಸಿರುವ ಘಟನೆಯನ್ನು ಖಂಡಿಸಿ ಮಂಗಳವಾರ ತಾಲೂಕು ಕಛೇರಿ ಮಿನಿ ವಿಧಾನಸೌಧದ ಮುಂಭಾಗ ಅಖಿಲ ಭಾರತ ವೀರಶೈವ ಮಹಾಸಭಾ, ಯುವ ಘಟಕ ಹಾಗು ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
    ಬಸವಣ್ಣನವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಮಸಿ ಬಳೆದು ಅವಮಾನಿಸಿರುವುದು ಖಂಡನೀಯ. ತಕ್ಷಣ ಅವಮಾನಗೊಳಿಸಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು. ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷೆ ನಂದಿನಿ ಮಲ್ಲಿಕಾರ್ಜುನ ನೇತೃತ್ವ ವಹಿಸಿದ್ದರು. ತಹಸೀಲ್ದಾರ್ ಆರ್. ಪ್ರದೀಪ್‌ರವರಿಗೆ ಮನವಿ ಸಲ್ಲಿಸಲಾಯಿತು.
    ಮಹಿಳಾ ಘಟಕದ ಅಧ್ಯಕ್ಷೆ ರೂಪ ನಾಗರಾಜ್, ಯುವಕ ಘಟಕದ ಅಧ್ಯಕ್ಷ ಮಂಜುನಾಥ್, ಜೇಡಿಕಟ್ಟೆ ಶ್ರೀ ಮರುಳಸಿದ್ದೇಶ್ವರ ಜನಕಲ್ಯಾಣ ಟ್ರಸ್ಟ್  ಅಧ್ಯಕ್ಷ ಸಿದ್ದಲಿಂಗಯ್ಯ, ಮಹಾಸಭಾ ಉಪಾಧ್ಯಕ್ಷ ವಾಗೀಶ್, ಪ್ರಧಾನ ಕಾರ್ಯದರ್ಶಿ ಬಿ.ಎಸ್ ಮಹೇಶ್‌ಕುಮಾರ್, ಸಹ ಕಾರ್ಯದರ್ಶಿ ಬಾರಂದೂರು ಮಂಜುನಾಥ್, ನಿರ್ದೇಶಕ ಜಗದೀಶ್ ಪಾಟೀಲ್, ಮಹಿಳಾ ಘಟಕದ ಉಪಾಧ್ಯಕ್ಷೆ ಶೋಭಾ ಪಾಟೀಲ್, ಕಾರ್ಯದರ್ಶಿ ಕವಿತಾ ಸುರೇಶ್, ಯುವ ಘಟಕದ ಉಪಾಧ್ಯಕ್ಷರಾದ ರುದ್ರೇಶ್, ಮಹಾದೇವ, ಕಾರ್ಯದರ್ಶಿ ಆನಂದ್, ಸಹ ಕಾರ್ಯದರ್ಶಿ ಚೇತನ್, ಖಜಾಂಚಿ ರಮೇಶ್, ಜಿಲ್ಲಾ ನಿರ್ದೇಶಕಿ ಎಸ್. ಪೂರ್ಣಿಮಾ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

No comments:

Post a Comment