Sunday, December 19, 2021

ಭದ್ರಾವತಿಯಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆ

 ಖಾಸಗಿ ಆಸ್ಪತ್ರೆ ನರ್ಸಿಂಗ್ ವಿದ್ಯಾರ್ಥಿನಿಯಲ್ಲಿ ಸೋಂಕು


ಭದ್ರಾವತಿ: ನಗರದಲ್ಲಿ ಮೊದಲ ಬಾರಿಗೆ ಒಮಿಕ್ರಾನ್ ಸೋಂಕು ಕಾಣಿಸಿಕೊಂಡಿದ್ದು, ಈ ಕುರಿತು ಆರೋಗ್ಯ ಸಚಿವ ಡಾ. ಸುಧಾಕರ್ ಸೋಮವಾರ ಸ್ಪಷ್ಟಪಡಿಸಿದ್ದಾರೆ.     

    ಇತ್ತೀಚೆಗೆ ನಗರದ ಖಾಸಗಿ ಆಸ್ಪತ್ರೆಯ ಒಟ್ಟು  27 ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಈ ಪೈಕಿ 20 ವರ್ಷದ ಓರ್ವ ವಿದ್ಯಾರ್ಥಿನಿಯಲ್ಲಿ ರೂಪಾಂತರಿ ವೈರಸ್ ಒಮಿಕ್ರಾನ್ ಪತ್ತೆಯಾಗಿದೆ.  ಶಿವಮೊಗ್ಗದಲ್ಲಿ ಪರೀಕ್ಷೆ ಬರೆಯಲು ತೆರಳಿದ್ದ ವಿದ್ಯಾರ್ಥಿಗಳಲ್ಲಿ ಓರ್ವ ವಿದ್ಯಾರ್ಥಿಯಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳ ತಪಾಸಣೆ ಪಡಿಸಲಾಗಿತ್ತು. ಈ ಸಂದರ್ಭದಲ್ಲಿ 27 ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಪತ್ತೆಯಾಗಿತ್ತು.    

     ಈ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನು ಸಂಪೂರ್ಣವಾಗಿ ಸೀಲ್ ಡೌನ್  ಮಾಡಿ ಆಸ್ಪತ್ರೆಯಲ್ಲಿ ಇರುವವರ ಮೇಲೆ ನಿಗಾ ವಹಿಸಲಾಗಿತ್ತು. ಈ ನಡುವೆ ಸೋಂಕಿತರ  ಮಾದರಿಯನ್ನು ಹೆಚ್ಚಿನ ತಪಾಸಣೆಗೆ  ಜಿನೋಮಿಕ್ ಸೀಕ್ವೆನ್ಸಿಂಗ್‌ಗೆ ರವಾನೆ ಮಾಡಲಾಗಿತ್ತು.  ಇದರ ಫಲಿತಾಂಶ ಭಾನುವಾರ  ಹೊರಬಿದ್ದಿದ್ದು   ಈ ಪೈಕಿ ಓರ್ವ ವಿದ್ಯಾರ್ಥಿನಿಯಲ್ಲಿ ರೂಪಾಂತರಿ ವೈರಸ್ ಪತ್ತೆಯಾಗಿದೆ.   ಈ   ವಿದ್ಯಾರ್ಥಿನಿಗೆ  ಹೆಚ್ಚಿನ ಚಿಕಿತ್ಸೆ  ಮುಂದುವರಿಸಲು ಸೂಚಿಸಲಾಗಿದೆ.

No comments:

Post a Comment